Breaking

Saturday, 2 October 2021

01 October 2021 Detailed Current Affairs in Kannada for All Competitive Exams

01 October 2021 Detailed Current Affairs in Kannada for All Competitive Exams


01 October 2021 Detailed Current Affairs in Kannada for All Competitive Exams



ಹಾಯ್, ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!! ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಪ್ರಚಲಿತ ವಿದ್ಯಮಾನಗಳ ಅರಿವು ಇರಲೇಬೇಕು. ತನ್ನ ಸಮುದಾಯ, ಸಮಾಜದಲ್ಲಿ ಪ್ರತಿ ನಿತ್ಯ ನಡೆಯುವ ಪ್ರತಿಯೊಂದು ಮಹತ್ವದ ಘಟನೆಗಳ ಅರಿವು ಎಲ್ಲರಲ್ಲಿಯೂ ಇರಲೇಬೆಕು. ಅದರಲ್ಲೂ ವಿಶೇಷವಾಗಿ ಸರಕಾರಿ ಸೇವೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಈ ಕುರಿತು ಕನಿಷ್ಟ ಸಾಮಾನ್ಯ ಜ್ಞಾನ ಇರಲೇಬೇಕು. ಆದ್ದರಿಂದ ಪ್ರಚಲಿತ ವಿದ್ಯಮಾನಗಳ/ಪ್ರಚಲಿತ ಘಟನೆಗಳ ಕುರಿತಾದ ಮಹತ್ವದ ವಿಷಯಗಳನ್ನು ಸಂಗ್ರಹಿಸಿ KPSC NOTES MCQS ಜಾಲತಾಣ ನೀಡುತ್ತಿದೆ. ಪ್ರಚಲಿತ ವಿದ್ಯಮಾನಗಳ ಮಹತ್ವದ ಅಂಶಗಳು, ಪ್ರತಿದಿನದ ಪ್ರಚಲಿತ ವಿದ್ಯಮಾನಗಳನ್ನು ಹಲವಾರು ಮೂಲಗಳಿಂದ ಸಂಗ್ರಹಿಸಿ ನೀಡುತ್ತಿದ್ದೇವೆ. ಜ್ಞಾನ ಎಲ್ಲರಿಗೂ ಹಂಚಿಕೆಯಾಗಬೇಕೆಂಬುದೇ ನಮ್ಮ ಉದ್ದೇಶ. ಈ ಕೆಳಗೆ ನೀಡಿದ ಪ್ರಚಲಿತ ವಿದ್ಯಮಾನಗಳನ್ನು ಧಾರವಾಡ ಪ್ರತಿಷ್ಠಿತ ಐಎಎಸ್ ಮತ್ತು ಕೆಎಎಸ್ ತರಬೇತಿ ಸಂಸ್ಥೆಯಾದ ಗುರುದೇವ ಐಎಎಸ್ ಮತ್ತು ಕೆಎಎಸ್ ತರಬೇತಿ ಸಂಸ್ಥೆಯವರು ಸಿದ್ಧಪಡಿಸಿದ ಪ್ರಚಲಿತ ವಿದ್ಯಮಾನಗಳಿಂದ ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಧಾರವಾಡದ ಗುರುದೇವ ಐಎಎಸ್ ಮತ್ತು ಕೆಎಎಸ್ ತರಬೇತಿ ಅಕ್ಯಾಡೆಮಿ ಕರ್ನಾಟಕದ ಅತ್ಯುತ್ತಮ ತರಬೇತಿ ಸಂಸ್ಥೆಗಳಲ್ಲಿ ಒಂದಾಗಿದೆ‌.

💥 Also Read: 01 October 2021 Detailed daily Current Affairs in Kannada for All Competitive Exams

💥 Also Read: 02 October 2021 Detailed daily Current Affairs in Kannada for All Competitive Exams

💥 Click here to Read Daily Current Affairs in Kannada

 

ಶಸ್ತ್ರಾಸ್ತ್ರ ನಿರ್ದೇಶನಾಲಯಕ್ಕೆ ಮೊದಲ ಮಹಾನಿರ್ದೇಶಕರಾಗಿ ಇ.ಆರ್‌.ಶೇಖ್ ನೇಮಕ

 

ಆರ್ಡನನ್ಸ್ ಫ್ಯಾಕ್ಟರಿ ಬೋರ್ಡ್ (ಒಎಫ್‌ಬಿ) ಯ ಸ್ಥಾನದಲ್ಲಿ ಸ್ಥಾಪನೆಯಾಗಿರುವ ಶಸ್ತ್ರಾಸ್ತ್ರ ನಿರ್ದೇಶನಾಲಯ (ಆರ್ಡನನ್ಸ್ ಡೈರೆಕ್ಟೋರೇಟ್)ದ ಮೊದಲ ಮಹಾ ನಿರ್ದೇಶಕರಾಗಿ ಇ.ಆರ್.ಶೇಖ್ ಅಧಿಕಾರ ವಹಿಸಿಕೊಂಡಿದ್ದಾರೆ. ಇಂಡಿಯನ್ ಆರ್ಡನನ್ಸ್ ಫ್ಯಾಕ್ಟರಿ ಸರ್ವಿಸ್ (ಐಒಎಫ್‌ಎಸ್)ನ 1984ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಅವರು, ಆಸ್ತಾಸ್ತ್ರ ತಯಾರಿಕೆಗೆ ಸಂಬಂಧಿಸಿದ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಅನುಭವ ಅವರಿಗೆ ಇದೆ. ಮಹಾರಾಷ್ಟ್ರದ ಜಲಗಾಂವ್ ನಲ್ಲಿರುವ ವರಂಗಾಂವ್‌ನಲ್ಲಿರುವ ಅತ್ಯಾಧುನಿಕ ಸಣ್ಣ ಪ್ರಮಾಣದ ಶಸ್ತ್ರಾಸ್ತ್ರಗಳ ಮತ್ತು ಮದ್ದುಗುಂಡುಗಳ ಕಾರ್ಖಾನೆ ಸ್ಥಾಪನೆಯಲ್ಲಿ ಅವರು ಮುಖ್ಯ ಭೂಮಿಕೆ ವಹಿಸಿದ್ದಾರೆ.

 

1 ಸಾವಿರ ಕೋಟಿ ರೂ. ಬಿಡುಗಡೆ : ರಕ್ಷಣೆಗೆ ಸಂಬಂಧಿಸಿದ 7 ಹೊಸ ಸಾರ್ವಜನಿಕ ವಲಯದ ಸಂಸ್ಥೆ (ಡಿಪಿಎಸ್‌ಯು) ಗಳ ಹಣಕಾಸು ಅಗತ್ಯಗಳನ್ನು ಪೂರೈಸುವ ಸಲುವಾಗಿ ಕೇಂದ್ರ ಹಣಕಾಸು ಸಚಿವಾಲಯವು ದೇಶದ ತುರ್ತು ನಿಧಿಯಿಂದ 1 ಸಾವಿರ ಕೋಟಿ ರೂ.ಗಳನ್ನು ಮುಂಗಡದ ರೂಪದಲ್ಲಿ ಬಿಡುಗಡೆ ಮಾಡಿದೆ.

 

ಕೈಗಾರಿಕಾ ವಲಯಗಳಲ್ಲಿನ ಬೆಳವಣಿಗೆಯಲ್ಲಿ ಪ್ರಗತಿ

ಮೂಲಸೌಕರ್ಯ ವಲಯಗಳ ಪ್ರಮುಖ ಎಂಟು ಕೈಗಾರಿಕೆಗಳು ಆಗಸ್ಟ್‌ನಲ್ಲಿ ಶೇಕಡ 11.6 ರಷ್ಟು ಬೆಳವಣಿಗೆ ಕಂಡಿವೆ. 2020 ರ ಆಗಸ್ಟ್‌ನಲ್ಲಿ ಈ ಎಂಟು ವಲಯಗಳು ಶೇ (-) 6.9ರಷ್ಟು ಇಳಿಕೆ ಕಂಡಿದ್ದವು.

 

* ದೇಶದ ಕೈಗಾರಿಕಾ ಉತ್ಪಾದನೆ ಸೂಚ್ಯಂಕಕ್ಕೆ (ಐಐಪಿ) ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲಸಂಸ್ಕರಣಾ ಉತ್ಪನ್ನಗಳು, ರಸಗೊಬ್ಬರ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ವಲಯಗಳು ಶೇ 40.27 ರಷ್ಟು ಕೊಡುಗೆ ನೀಡುತ್ತಿವೆ.

* ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ, ಕಳೆದ ವರ್ಷದ ಆಗಸ್ಟ್ ಗೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ನಲ್ಲಿ ಕಲ್ಲಿದ್ದಲು, ನೈಸರ್ಗಿಕ ಅನಿಲ, ಸಂಸ್ಕರಣಾ ಉತ್ಪನ್ನಗಳು, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ವಲಯಗಳ ಉತ್ಪಾದನೆ ಹೆಚ್ಚಾಗಿದೆ. ಇನ್ನೊಂದೆಡೆ ಕಚ್ಚಾ ತೈಲ ಮತ್ತು ರಸಗೊಬ್ಬರ ಕೈಗಾರಿಕೆಗಳ ಉತ್ಪಾದನೆ ಇಳಿಕೆ ಆಗಿದೆ. ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲದ ಉತ್ಪಾದನೆಯು ಕಳೆದ ಆಗಸ್ಟ್‌ಗೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ನಲ್ಲಿ ಶೇ 20.6ರಷ್ಟು ಬೆಳವಣಿಗೆ ಕಂಡಿದೆ.

ಸಿಮೆಂಟ್ ಉತ್ಪಾದನೆಯು ಶೇ36.3ರಷ್ಟು, ಉಕ್ಕು ಉತ್ಪಾದನೆಯು ಶೇ.5.1ರಷ್ಟು ಏರಿಕೆ ಆಗಿದೆ. ಈ ಎಂಟು ವಲಯಗಳಿಗೆ ಸೇರಿದ ಕೈಗಾರಿಕೆಗಳ ಉತ್ಪಾದನೆಯಲ್ಲಿನ ಬೆಳವಣಿಗೆಯು ಏಪ್ರಿಲ್‌ನಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ಶೇ 19.3 ಆಗಿದೆ. ಹಿಂದಿನ ವರ್ಷದ ಏಪ್ರಿಲ್ - ಆಗಸ್ಟ್ ಅವಧಿಯಲ್ಲಿ ಈ ವಲಯದಲ್ಲಿ ಶೇ (-) 17.3ರಷ್ಟು ಇಳಿಕೆ ದಾಖಲಾಗಿತ್ತು.

 

ನಗರಗಳ ರೂಪಾಂತರದ ಯೋಜನೆ

 

7 ವರ್ಷಗಳ ಹಿಂದೆ ಜಾರಿಗೆ ತಂದ ಸ್ವಚ್ಛ ಭಾರತ ಹಾಗೂ ಆರು ವರ್ಷಗಳ ಹಿಂದೆ ಅನುಷ್ಠಾನಗೊಂಡ ಅಮೃತ್‌ (ಅಟಲ್ ಪುನರುಜ್ಜಿವನ ಹಾಗೂ ನಗರ ರೂಪಾಂತರ ಮಿಷನ್) ಯೋಜನೆಗಳ ಯಶಸ್ಸಿನಿಂದ ಉತ್ತೇಜಿತ ಗೊಂಡಿರುವ ಕೇಂದ್ರ ಸರ್ಕಾರ, ಈ ಎರಡೂ ಯೋಜನೆಗಳ ಎರಡನೇ ಹಂತವನ್ನು ಪ್ರಾರಂಭಿಸುತ್ತಿದೆ.

 

* ಸ್ವಚ್ಛ ಭಾರತ ಮಿಷನ್ ನಗರ 2.0 ಹಾಗೂ ಅಮೃತ್ 2.0 ಎಂಬ ಈ ಎರಡೂ ಯೋಜನೆಗಳಿಗೂ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.

* ಈ ಎರಡೂ ಯೋಜನೆಗಳ ಒಟ್ಟಾರೆ ವೆಚ್ಚ 4.28 ಲಕ್ಷ ಕೋಟಿ ರೂ. ದೇಶದ ಎಲ್ಲ ನಗರಗಳನ್ನು ಕಸಮುಕ್ತ ಮಾಡುವುದರ ಜೊತೆಗೆ, ಕುಡಿಯುವ ನೀರಿನ ಖಾತ್ರಿ ಒದಗಿಸುವುದು ಈ ಯೋಜನೆಗಳ ಒಟ್ಟಾರೆ ಉದ್ದೇಶ.

 

ಸ್ವಚ್ಛ ಭಾರತ ನಗರ 2.0 

 

ದೇಶದ ಎಲ್ಲ ನಗರಗಳನ್ನೂ ಕಸ ಮುಕ್ತಗೊಳಿಸಿ, ಶೌಚಾಲಯ ಹಾಗೂ ಗೃಹ ಬಳಕೆಯ ನೀರನ್ನು ನಿರ್ವಹಿಸುವುದು. ಎಲ್ಲ ನಗರ ಸ್ಥಳೀಯ ಸಂಸ್ಥೆಗಳನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವುದು. ತನ್ಮೂಲಕ ನಗರ ಪ್ರದೇಶಗಳಲ್ಲಿ ಸುರಕ್ಷಿತ ನೈರ್ಮಲ್ಯ ಕನಸನ್ನು ಸಾಕಾರಗೊಳಿಸುವುದು. ಜತೆಗೆ ಘನ ತಾಜ್ಯಗಳನ್ನು ಮೂಲದಲ್ಲೇ ವಿಂಗಡಿಸುವುದಕ್ಕೆ ಒತ್ತು ನೀಡುವುದು. 3 ಆರ್ (ರೆಗ್ಯುಸ್, ರೀಯೂಸ್, ರೀಸೈಕಲ್) ಎಂಬ ತತ್ವವನ್ನು ಬಳಸಿಕೊಳ್ಳುವುದು. ನಗರಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲ ಬಗೆಯ ಘನ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸುವುದು, ಯೋಜನೆಯ ಒಟ್ಟು ವೆಚ್ಚ 1.41 ಲಕ್ಷ ಕೋಟಿ ರೂ.

 

* ಅಮೃತ್ 2.0 ಉದ್ದೇಶ

 

ದೇಶದಲ್ಲಿರುವ ಎಲ್ಲ 4700 ನಗರ ಸ್ಥಳೀಯ ಸಂಸ್ಥೆಗಳಿಗೆ 2.68 ಕೊಳಾಯಿ ಸಂಪರ್ಕ ನೀಡುವ ಮೂಲಕ ಎಲ್ಲ ಮನೆಗಳಿಗೂ ನೀರು ಪೂರೈಕೆ ನೀರು ಪೂರೈಕೆ ಗುರಿಯನ್ನು ತಲುಪುವುದು. 500 ಅಮೃತ್ ನಗರಗಳಲ್ಲಿ ಶೇ. 100 ರಷ್ಟು ಒಳಚರಂಡಿ ವ್ಯವಸ್ಥೆ. ಇದಕ್ಕಾಗಿ 2.64 ಕೋಟಿ ಒಳಚರಂಡಿ ಅಥವಾ ಸೆಪ್ಟಿಕ್ ಸಂಪರ್ಕ ಒದಗಿಸುವುದು. ತನ್ಮೂಲಕ 10.5 ಕೋಟಿ ನಗರ ವಾಸಿಗಳಿಗೆ ಅನುಕೂಲ ಕಲ್ಪಿಸುವುದು. ಈ ಯೋಜನೆಯ ಒಟ್ಟು ವೆಚ್ಚ 2.87 ಲಕ್ಷ ಕೋಟಿ ರುಪಾಯಿಗಳಾಗಿದೆ.

💥 Also Read: 01 October 2021 Detailed daily Current Affairs in Kannada for All Competitive Exams

💥 Also Read: 02 October 2021 Detailed daily Current Affairs in Kannada for All Competitive Exams

💥 Click here to Read Daily Current Affairs in Kannada

 

ಭಾರತದ ವಾಯುಪಡೆ ಮುಖ್ಯಸ್ಥರಾಗಿ ಚೌಧರಿ ನೇಮಕ

 

ಭಾರತೀಯ ವಾಯುಪಡೆಯ ನೂತನ ಮುಖ್ಯ ಸ್ಥರಾಗಿ ಏರ್‌ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಪ್ರಮಾಣ ವಚನ ಸ್ವೀಕರಿಸಿದನು. ಈ ಹಿಂದಿನ ಏರ್‌ಚೀಫ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಚೌಧರಿ ಅವರ ನೇಮಕವಾಗಿದೆ.

 

ಭಾರತೀಯ ವಾಯುಸೇನೆ :

 

* ಸ್ಥಾಪನೆ - 8 ಅಕ್ಟೋಬರ್ 1932

* ಪ್ರಧಾನ ಕಚೇರಿ - ನವದೆಹಲಿ

* ಧ್ಯೇಯ ವಾಕ್ಯ - “Touching the sky with Glory”

 

ಹಿರಿಯ ನಾಗರಿಕ ಪ್ರಶಸ್ತಿ ಪ್ರಕಟ

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಶ್ವ ಹಿರಿಯ ನಾಗರಿಕರ ದಿನದ ಹಿನ್ನೆಲೆಯಲ್ಲಿ ನೀಡುವ ಪ್ರಶಸ್ತಿಗೆ ಆರು ಮಂದಿ ಸಾಧಕರು ಹಾಗೂ ಒಂದು ಸಂಸ್ಥೆ ಸೇರಿದಂತೆ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸಚಿವ ಹಾಲಪ್ಪ ಆಚಾರ್ ಪ್ರಕಟಿಸಿದ್ದಾರೆ.

 

* ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ನಾನಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರು ಹಾಗೂ ಒಂದು ಸಂಸ್ಥೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಯು 1 ಲಕ್ಷ ರೂ. ನಗದು, ಸ್ಮರಣಿಕೆ, ಪ್ರಮಾಣ ಪತ್ರ ಒಳಗೊಂಡಿದೆ ಎಂದರು.

 

ಪ್ರಶಸ್ತಿ ಪುರಸ್ಕೃತರ ಪಟ್ಟಿ :

ಹಾವೇರಿಯ ಗುರುಪಾದಪ್ಪ ಅಂಚೇರ (ಶಿಕ್ಷಣ),

ಬಾಗಲಕೋಟೆಯ ಡಾ|| ಕರವೀರಪ್ರಭು ಕ್ಯಾಲಕೊಂಡ (ಸಾಹಿತ್ಯ),

ರಾಯಚೂರಿನ ಶರಣಪ್ಪ ಗೋನಾಳ (ಕಲೆ),

ಉಡುಪಿಯ ಎಸ್.ಜನಾರ್ಧನ (ಸಮಾಜ ಸೇವೆ), ಕೋಲಾರದ ಅಂಚೆ ಅಶ್ವತ್ಥ (ಪ್ರತಿಭೆ/ಕ್ರೀಡೆ)

ಕೊಪ್ಪಳದ ಬಿ.ಕಿಷನ್ ರಾವ್ (ಕಾನೂನು) ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಾಗಿ ಬೀದರ್‌ನ ಡಾ. ಅಂಬೇಡ್ಕರ್ ಕಲ್ಬರಲ್ ಅಂಡ್ ವೆಲ್‌ಫೇರ ಸೊಸೈಟಿ ಸಂಸ್ಥೆಯೂ ಪ್ರಶಸ್ತಿಗೆ ಭಾಜನವಾಗಿದೆ ಎಂದರು.

 

* ವಿಶೇಷ ಸಾಧನೆಗಾಗಿ ಒಬ್ಬರು ಹಿರಿಯ ನಾಗರಿಕರನ್ನು ಪ್ರತಿ ವರ್ಷ ಸನ್ಮಾನಿಸಲಾಗುತ್ತದೆ. ಈ ಬಾರಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸ್ಮರಣಾರ್ಥ ನಾಲ್ಕು ಕಂದಾಯ ವಿಭಾಗಗಳಲ್ಲಿ ಒಬ್ಬರಂತೆ ನಾಲ್ಕು ಮಂದಿ ವಿಶೇಷ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

 

ಹಿರಿಯ ನಾಗರಿಕರ ಸಹಾಯವಾಣಿ 14567 ಗೆ ಚಾಲನೆ:

ಕೇಂದ್ರ ಸರ್ಕಾರದ 'ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ' 14567ಗೆ ಚಾಲನೆ ನೀಡಲಾಗಿದೆ.

💥 Also Read: 01 October 2021 Detailed daily Current Affairs in Kannada for All Competitive Exams

💥 Also Read: 02 October 2021 Detailed daily Current Affairs in Kannada for All Competitive Exams

💥 Click here to Read Daily Current Affairs in Kannada

 

ನುಸ್ರತ್ ಬರೂಚಾಗೆ “ಏಷಿಯಾದ ಅತ್ಯುತ್ತಮ ನಟಿ ಪ್ರಶಸ್ತಿ'

 

ದಕ್ಷಿಣ ಕೊರಿಯಾದ ಪ್ರತಿಷ್ಠಿತ 'ಭೂಸನ್ ಫಿಲ್ಸ್ ಫೆಸ್ಟಿವಲ್' ನಲ್ಲಿ ಏಷಿಯಾದ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಬಾಲಿವುಡ್ ನಟಿ ನುಸ್ರತ್ ಬರೂಚಾ ಪಡಿದಿದ್ದಾರೆ. ಎಂದು ಐಎಎನ್ಎಸ್ ವರದಿ ಮಾಡಿದೆ.

 

* 2020 ರ ಲಾಕ್ಡೌನ್ ಸಂದರ್ಭದಲ್ಲಿ ನೆಟ್ ಫಿಕ್ಸ್‌ನಲ್ಲಿ ಬಿಡುಗಡೆಯಾಗಿದ್ದ ರಾಜ್ ಮೆಹ್ಲಾ ನಿರ್ದೇಶನದ 'ಅಜೆಬ್

ದಾಸ್ತಾನ್' ಸಿನಿಮಾದಲ್ಲಿನ ಅಭಿಮಾನಕ್ಕಾಗಿ ನುಸ್ರತ್ ಬರೂಚಾ ಅವರು ಅತ್ಯುತ್ತಮ ಏಷಿಯಾ ನಟಿ ಪ್ರಶಸ್ತಿಗೆ ಭಾಜನಾಗಿದ್ದಾರೆ. ಇದೇ ಮೊದಲ ಬಾರಿಗೆ ಬಾಲಿವುಡ್‌ಗೆ ಈ ಪ್ರಶಸ್ತಿ ಬಂದಿದೆ.

* ಭೂಸನ್ ಫಿಲ್ಕ್ ಫೆಸ್ಟಿವಲ್‌ನಲ್ಲಿ ಏಷಿಯಾ ಭಾಗದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಗುರುತಿಸಲು “ಏಷಿಯನ್ ಕಂಟೆಸ್ಟಂಟ್ ಅವಾರ್ಡ್' ಪ್ರಶಸ್ತಿ ನೀಡಲಾಗುತ್ತಿದೆ.

* 2006 ರಲ್ಲಿ 'ಜೈ ಸಂತೋಷಿ ಮಾ' ಸಿನಿಮಾ ಮೂಲಕ ತಮ್ಮ ಸಿನಿಪಯಣ ಆರಂಭಿಸಿದ್ದ ನುಸ್ರತ್ ಬರೂಚಾ 'ಲವ್ ಸೆಕ್ಸ್ ಔರ್ ದೋಖಾ', 'ಪ್ಯಾರಾ ಕಾ ಪಂಚನಾಮಾ', 'ಡೀಮ್ ಗರ್ಲ್' ಸೇರಿದಂತೆ ಬಾಲಿವುಡ್‌ನಲ್ಲಿ ಸುಮಾರು 13 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

 

ಹುರೂನ್ ಇಂಡಿಯಾ ರಿಚ್ ಲಿಸ್ಟ್ ಪ್ರಕಟ

 

ಹುರೂನ್ ಇಂಡಿಯಾ ಸಿದ್ಧಪಡಿಸುವ 'ಐಐಎಫ್ ಎಲ್ ವೆಲ್ತ್ ಹುರೂನ್ ಇಂಡಿಯಾ ರಿಚ್ ಲಿಸ್ಟ್ - 2021' ಬಿಡುಗಡೆ ಆಗಿದ್ದು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ (ಆರ್‌ಐಎಲ್) ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಭಾರತದ ಅತ್ಯಂತ ಸಿರಿವಂತ ವ್ಯಕ್ತಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

 

ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಕುಟುಂಬವು ಪಟ್ಟಿಯಲ್ಲಿ ಎರಡನೆಯ ಸ್ಥಾನದಲ್ಲಿ ಇದೆ. ಅದಾನಿ ಅವರು ಪ್ರತಿದಿನ ರೂ. 1,000 ಕೋಟಿ ಆದಾಯ ಗಳಿಸುತ್ತಿದ್ದಾರೆ ಎಂದು ವರದಿಯು ಹೇಳಿದೆ.

* ಮುಕೇಶ್ ಅಂಬಾನಿ ಅವರು ಸತತವಾಗಿ ಹತ್ತು ವರ್ಷಗಳಿಂದ 'ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ' ಆಗಿದ್ದಾರೆ ಎಂದು ಹುರೂನ್ ಇಂಡಿಯಾ ಹೇಳಿದೆ. 

* ಸೆಪ್ಟೆಂಬರ್ 15 ರವರೆಗಿನ ಅಂಕಿ-ಅಂಶಗಳನ್ನು ಆಧರಿಸಿ ಈ ಪಟ್ಟಿ ಸಿದ್ಧಪಡಿಸಲಾಗಿದೆ. ಪಟ್ಟಿಯಲ್ಲಿ ಇರುವ ಶ್ರೀಮಂತರ ಸಂಪತ್ತಿನ ಒಟ್ಟು ಮೌಲ್ಯವು ಶೇಕಡ 51ರಷ್ಟು ಹೆಚ್ಚಳವಾಗಿದೆ. ರಾಸಾಯನಿಕಗಳು ಮತ್ತು ಸಾಫ್ಟ್ವೇರ್ ಉದ್ಯಮ ವಲಯಗಳು ಹೊಸ ಶ್ರೀಮಂತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೃಷ್ಟಿಸಿವೆ.

 

ಹುರೂನ್ ಸಿದ್ಧಪಡಿಸಿದ ಶ್ರೀಮಂತರ ಪಟ್ಟಿ 

💥💥💥💥
ಹುರೂನ್ ಸಿದ್ಧಪಡಿಸಿದ ಶ್ರೀಮಂತರ ಪಟ್ಟಿ
ಸ್ಥಾನ ಹೆಸರು ಸಂಪತ್ತಿನ ಮೌಲ್ಯ ಕಂಪನಿ ವಾಸಸ್ಥಳ
01 ಮುಕೇಶ್ ಅಂಬಾನಿ ಮತ್ತು ಕುಟುಂಬ ರೂ.7.18 ಆರ್‌ಐಎಲ್ ಮುಂಬೈ
02 ಗೌತಮ್ ಅದಾನಿ ಮತ್ತು ಕುಟುಂಬ ರೂ.5.05 ಅದಾನಿ ಅಹಮದಾಬಾದ್
03 ಶಿವ ನಾಡಾರ್‌ ಮತ್ತು ಕುಟುಂಬ ರೂ.2.36 ಎಚ್ಸಿಎಲ್ ನವದೆಹಲಿ
04 ಎಸ್.ಪಿ. ಹಿಂದುಜಾ ಮತ್ತು ಕುಟುಂಬ ರೂ.2.20 ಹಿಂದುಜಾ ಲಂಡನ್
05 ಎಲ್.ಎನ್.ಮಿತ್ತಲ್‌ ಮತ್ತು ಕುಟುಂಬ ರೂ.1.74 ಆರ್ಸೆಲರ್ ಮಿತ್ತಲ್ ಲಂಡನ್
06 ಸೈರಸ್ ಪೂನಾವಾಲಾಮತ್ತು ಕುಟುಂಬ ರೂ.1.63 ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಪುಣೆ
07 ರಾಧಾಕಿಶನ್ ದಮಾನಿ ಮತ್ತು ಕುಟುಂಬ ರೂ.1.54 ಅವೆನ್ಯು ಸೂಪರ್ ಮಾರ್ಟ್ಟ ಮುಂಬೈ
08 ವಿನೋದ್ ಶಾಂತಿಲಾಲ್ ಅದಾನಿ ಮತ್ತು ಕುಟುಂಬ ರೂ.1.31 ಅದಾನಿ ದುಬೈ
09 ಕುಮಾರ ಮಂಗಲಂ ಬಿರ್ಲಾ ಮತ್ತು ಕುಟುಂಬ ರೂ.1.22 ಆದಿತ್ಯ ಬಿರ್ಲಾ ಮುಂಬೈ
10 ಜಯ್‌ಚೌಧರಿ ರೂ.1.21 ಝಡ್‌ಸ್ಕೇಲರ್ ಸ್ಯಾನ್‌ಜೋ
ಸಂಪತ್ತಿನ ಮೌಲ್ಯವನ್ನು ಲಕ್ಷ ಕೋಟಿಗಳಲ್ಲಿ ನೀಡಲಾಗಿದೆ.

 

 

 

ವಿಶ್ವ ಸಸ್ಯಹಾರ ಜಾಗೃತಿ ದಿನ : ಅಕ್ಟೋಬರ್ 01

 

ಸಸ್ಯಹಾರದ ಜಾಗೃತಿ ಬಗ್ಗೆ ಆಂದೋಲನ ಶುರು  ಮಾಡಿದ ಮೊದಲ ದೇಶ ಉತ್ತರ ಅಮೇರಿಕಾ, 1977 ರಲ್ಲಿ ಆರಂಭವಾದ ಅಮೇರಿಕಾದ ವೆಜಿಟೇರಿಯನ್ ಸೊಸೈಟಿ (North America Vegeterian Society) ಗೆ 1978 ರಲ್ಲಿ ಅಂತರರಾಷ್ಟ್ರೀಯ ಸಸ್ಯಾಹಾರಿಗಳ ಒಕ್ಕೂಟ ಮಾನ್ಯತೆ ನೀಡಿತು. ನಂತರದ ದಿನಗಳಲ್ಲಿ ಸಸ್ಯಾಹಾರದ ವಿಶ್ವದ ಜಾಗೃತಿ ದಿನ ಆಚರಣೆಯು ವ್ಯವಸ್ಥಿತವಾದ ರೀತಿಯಲ್ಲಿ ಆರಂಭಗೊಂಡಿತು.

 

ದೇಶದಲ್ಲಿನ ಒಟ್ಟು ಸಸ್ಯಾಹಾರಿಗಳ ಪ್ರಮಾಣ ಶೇ. 75

ದೇಶದಲ್ಲಿನ ಪೂರ್ತಿ ಸಸ್ಯಾಹಾರಿಗಳ ಪ್ರಮಾಣ ಶೇ. 25

ಸಸ್ಯಾಹಾರಿ ಆಹಾರ ಸೇವಿಸುವ ಮೊದಲ 3 ನಗರಗಳು

1) ಇಂದೋರ್‌ (49%)

2) ಮೀರತ್ (36%)

3) ದೆಹಲಿ (30%)

 

* ಅತೀ ಹೆಚ್ಚು ಸಸ್ಯಾಹಾರಿಗಳನ್ನು ಹೊಂದಿರುವ ದೇಶ ಭಾರತ.

 

ಸಸ್ಯ ಆಹಾರದಿಂದ ಆಗುವ ಉಪಯೋಗಗಳು:

 

* ಹಣ್ಣುಗಳು, ನಾರಿನಂಶವಿರುವ ಪದಾರ್ಥಗಳು ಹಾಗೂ ತರಕಾರಿಗಳು ಕೊಲೆಸ್ಟ್ರಾಲ್ ಮತ್ತು ಶ್ವಾಸಕೋಶದ ಕ್ಯಾನ್ಸರ್ ಅನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸಿವೆ. ಹಾಗೂ ಜೀರ್ಣಕ್ರಿಯೆಗೆ ತುಂಬಾ ಸಹಾಯ ಮಾಡುತ್ತವೆ.

* ನಾರಿನ ಅಂಶವಿರುವ ತರಕಾರಿಗಳು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗಿವೆ. ತರಕಾರಿಯಲ್ಲಿ Antioxidants ತರುವ ಐಎಎಸ್ & ತ್ವಚೆಯ ಕಾಂತಿ/ಸೌಂದರ್ಯವನ್ನು ಹೆಚ್ಚಿಸುತ್ತದೆ. 

* ತರಕಾರಿಗಳಲ್ಲಿ ಆರೋಗ್ಯಕ್ಕೆ ಅಗತ್ಯವಾದ ಅಮೈನೊ ಅಂಶಗಳು ಅಧಿಕವಾಗಿರುತ್ತವೆ.

 

💥 Also Read: 01 October 2021 Detailed daily Current Affairs in Kannada for All Competitive Exams

💥 Also Read: 02 October 2021 Detailed daily Current Affairs in Kannada for All Competitive Exams

💥 Click here to Read Daily Current Affairs in Kannada

 

ಅಂತರರಾಷ್ಟ್ರೀಯ ಹಿರಿಯ ನಾಗರಿಕರ ದಿನ ಅಕ್ಟೋಬರ್ 1

 

ವಿಶ್ವ ಸಂಸ್ಥೆಯ ಸಾಮಾನ್ಯ International Senior Citizen's Day ಸಭೆಯು 1990 ಡಿಸೆಂಬರ್ 14 ರಂದು ಅಕ್ಟೋಬರ್ 01ನ್ನು ಅಂತಾರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಇದಕ್ಕೆ ಮುಂಚೆಯೇ ವಿಯೆನ್ನಾ ಇಂಟರ್ ನ್ಯಾಷನಲ್ ಪ್ಲಾನ್ ಆಫ್ ಆಕ್ಷನ್ ಆನ್ ಏಜಿಂಗ್ ಹಿರಿಯ ವ್ಯಕ್ತಿಗಳ ದಿನದ ಬಗ್ಗೆ ಉಲ್ಲೇಖಿಸಲಾಗಿತ್ತು. 1982 ರಲ್ಲಿ ಅಸೆಂಬ್ಲಿ ಆನ್ ಏಜಿಂಗ್ ಇದನ್ನು ಅಂಗೀಕರಿಸಿತು. 2002 ರಲ್ಲಿ ಎರಡನೇ ವಿಶ್ವಸಭೆಯು 21ನೇ ಶತಮಾನದಲ್ಲಿ ವಯಸ್ಸಾದವರ ಅವಕಾಶಗಳು ಮತ್ತು ಸವಾಲುಗಳಿಗೆ ಸ್ಪಂದಿಸಲು ಮತ್ತು ಎಲ್ಲಾ ವಯಸ್ಸಿನವರಿಗೂ ಸಮಾಜದ ಅಭಿ ವೃದ್ಧಿಯನ್ನು ಉತ್ತೇಜಿಸಲು ಮ್ಯಾಡ್ರಿಡ್ ಇಂಟರ್ ನ್ಯಾಷನಲ್ ಪ್ಲಾನ್ ಆಫ್ ಆ್ಯಕ್ಷನ್ ಆನ್ ಏಜಿಂಗ್ (Madrid International Plan of Action on Aging) ಅನ್ನು ಅಂಗೀಕರಿಸಿತು.

 

ಪ್ರಚಲಿತ ಘಟನೆಯ ಪ್ರಶೋತ್ತರಗಳು

 

1. ಪ್ರಸ್ತುತ ಜಾರಿಯಲ್ಲಿರುವ ಈ ಕೆಳಗಿನ ಯಾವ ಯೋಜನೆಯನ್ನು ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಲ್ಲಿ ವಿಲೀನಗೊಳಿಸಲಾಗಿದೆ.

ಎ) ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ

ಬಿ) ಪಹಲ್ ಯೋಜನೆ

ಸಿ) ಮಧ್ಯಾಹ್ನ ಬಿಸಿಯೂಟ ಯೋಜನೆ 

ಡಿ) ಕುಸುಮ್ ಯೋಜನೆ

 

2, 2021 ನೇ ಸಾಲಿನ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಗೆ ಈ ಕೆಳಗಿನ ಯಾರು ಭಾಜನರಾಗಿದ್ದಾರೆ?

ಎ) ಮೀರಾಬಾಯಿ ಕೊಪ್ಪಿಕರ್

ಬಿ) ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಮಠ

ಸಿ) ಎ ಮತ್ತು ಬಿ

ಡಿ) ರಾಕೇಶ್ ಟಿಕಾಯತ್

 

3. ರೈಟ್ ಲೈಕ್ಲಿಹುಡ್ ಪ್ರಶಸ್ತಿ ಸ್ಥಾಪನೆಯಾದ ವರ್ಷ

ಎ) 1969

ಬಿ) 1973

ಸಿ) 1980

ಡಿ) 1968

 

4. ಪ್ಯಮಿಯಾ ಕಿರಿದಾ ಇತ್ತೀಚೆಗೆ ಈ ಕೆಳಗಿನ ಯಾವ ದೇಶದ ಪ್ರಧಾನಮಂತ್ರಿಯಾಗಿ ನೇಮಕಗೊಂಡಿದ್ದಾರೆ?

ಎ) ಆಸ್ಟ್ರೇಲಿಯಾ 

ಬಿ) ಜರ್ಮನ್

ಸಿ) ಜಪಾನ್

ಡಿ) ಬ್ರೆಜಿಲ್

 

5, ರೌಧಾ ಬೌಡೆಂಟ್‌ರವರು ಈ ಕೆಳಗಿನ ಯಾವ ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಆಯ್ಕೆಗೊಂಡಿದ್ದಾರೆ?

ಎ) ಟ್ಯುನಿಶಿಯಾ 

ಬಿ) ಮಲೇಷಿಯಾ

ಸಿ) ಫಿಲಿಫೈನ್ಸ್

ಡಿ) ಫಿನ್‌ಲ್ಯಾಂಡ್

💥 Also Read: 01 October 2021 Detailed daily Current Affairs in Kannada for All Competitive Exams

💥 Also Read: 02 October 2021 Detailed daily Current Affairs in Kannada for All Competitive Exams

💥 Click here to Read Daily Current Affairs in Kannada

 

No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

03 November 2021 Detailed Daily Current Affairs in Kannada for All Competitive Exams

           03 November 2021 Detailed Daily Current Affairs in Kannada for All Competitive Exams ಹಾಯ್ ,  ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!! ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ  ಪ್ರಚಲಿತ ವಿದ್ಯಮಾನ ಗಳ  ಅರಿವು ಇರಲೇಬೇಕು. ತನ್ನ ಸಮುದಾಯ ,  ಸಮಾಜದಲ್ಲಿ ಪ್ರತಿ ನಿತ್ಯ ನಡೆಯುವ ಪ್ರತಿಯೊಂದು ಮಹತ್ವದ ಘಟನೆಗಳ ಅರಿವು ಎಲ್ಲರಲ್ಲಿಯೂ ಇರಲೇಬೆಕು. ಅದರಲ್ಲೂ ವಿಶೇಷವಾಗಿ ಸರಕಾರಿ ಸೇವೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಈ ಕುರಿತು ಕನಿಷ್ಟ ಸಾಮಾನ್ಯ ಜ್ಞಾನ ಇರಲೇಬೇಕು. ಆದ್ದರಿಂದ ಪ್ರಚಲಿತ ವಿದ್ಯಮಾನಗಳ/ಪ್ರಚಲಿತ ಘಟನೆಗಳ ಕುರಿತಾದ ಮಹತ್ವದ ವಿಷಯಗಳನ್ನು ಸಂಗ್ರಹಿಸಿ  KPSC NOTES MCQS   ಜಾಲತಾಣ ನೀಡುತ್ತಿದೆ. ಪ್ರಚಲಿತ ವಿದ್ಯಮಾನಗಳ ಮಹತ್ವದ ಅಂಶಗಳು ,  ಪ್ರತಿದಿನದ ಪ್ರಚಲಿತ ವಿದ್ಯಮಾನಗಳನ್ನು ಹಲವಾರು ಮೂಲಗಳಿಂದ ಸಂಗ್ರಹಿಸಿ ನೀಡುತ್ತಿದ್ದೇವೆ. 💥  Click here to Read Daily Current Affairs in Kannada  

03 November 2021 Daily Current Affairs Quiz in Kannada for All Competitive Exams

          03 November 2021 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-2021 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2021 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021,   September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...