Breaking

Saturday, 9 October 2021

07 October 2021 Detailed daily Current Affairs in Kannada for All Competitive Exams

 

07 October 2021 Detailed daily Current Affairs in Kannada for All Competitive Exams


01 October 2021 Detailed Current Affairs in Kannada for All Competitive Exams



ಹಾಯ್ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!! ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಪ್ರಚಲಿತ ವಿದ್ಯಮಾನಗಳ ಅರಿವು ಇರಲೇಬೇಕು. ತನ್ನ ಸಮುದಾಯಸಮಾಜದಲ್ಲಿ ಪ್ರತಿ ನಿತ್ಯ ನಡೆಯುವ ಪ್ರತಿಯೊಂದು ಮಹತ್ವದ ಘಟನೆಗಳ ಅರಿವು ಎಲ್ಲರಲ್ಲಿಯೂ ಇರಲೇಬೆಕು. ಅದರಲ್ಲೂ ವಿಶೇಷವಾಗಿ ಸರಕಾರಿ ಸೇವೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಈ ಕುರಿತು ಕನಿಷ್ಟ ಸಾಮಾನ್ಯ ಜ್ಞಾನ ಇರಲೇಬೇಕು. ಆದ್ದರಿಂದ ಪ್ರಚಲಿತ ವಿದ್ಯಮಾನಗಳ/ಪ್ರಚಲಿತ ಘಟನೆಗಳ ಕುರಿತಾದ ಮಹತ್ವದ ವಿಷಯಗಳನ್ನು ಸಂಗ್ರಹಿಸಿ KPSC NOTES MCQS ಜಾಲತಾಣ ನೀಡುತ್ತಿದೆ. ಪ್ರಚಲಿತ ವಿದ್ಯಮಾನಗಳ ಮಹತ್ವದ ಅಂಶಗಳುಪ್ರತಿದಿನದ ಪ್ರಚಲಿತ ವಿದ್ಯಮಾನಗಳನ್ನು ಹಲವಾರು ಮೂಲಗಳಿಂದ ಸಂಗ್ರಹಿಸಿ ನೀಡುತ್ತಿದ್ದೇವೆ. ಜ್ಞಾನ ಎಲ್ಲರಿಗೂ ಹಂಚಿಕೆಯಾಗಬೇಕೆಂಬುದೇ ನಮ್ಮ ಉದ್ದೇಶ. ಈ ಕೆಳಗೆ ನೀಡಿದ ಪ್ರಚಲಿತ ವಿದ್ಯಮಾನಗಳನ್ನು ಧಾರವಾಡ ಪ್ರತಿಷ್ಠಿತ ಐಎಎಸ್ ಮತ್ತು ಕೆಎಎಸ್ ತರಬೇತಿ ಸಂಸ್ಥೆಯಾದ ಗುರುದೇವ ಐಎಎಸ್ ಮತ್ತು ಕೆಎಎಸ್ ತರಬೇತಿ ಸಂಸ್ಥೆಯವರು ಸಿದ್ಧಪಡಿಸಿದ ಪ್ರಚಲಿತ ವಿದ್ಯಮಾನಗಳಿಂದ ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಧಾರವಾಡದ ಗುರುದೇವ ಐಎಎಸ್ ಮತ್ತು ಕೆಎಎಸ್ ತರಬೇತಿ ಅಕ್ಯಾಡೆಮಿ ಕರ್ನಾಟಕದ ಅತ್ಯುತ್ತಮ ತರಬೇತಿ ಸಂಸ್ಥೆಗಳಲ್ಲಿ ಒಂದಾಗಿದೆ‌.

💥 Also Read: 01 October 2021 Detailed daily Current Affairs in Kannada for All Competitive Exams   

💥 Also Read: 02 October 2021 Detailed daily Current Affairs in Kannada for All Competitive Exams  

💥 Also Read: 03 October 2021 Detailed daily Current Affairs in Kannada for All Competitive Exams  

💥 Also Read: 04 October 2021 Detailed daily Current Affairs in Kannada for All Competitive Exams  

💥 Also Read: 05 October 2021 Detailed daily Current Affairs in Kannada for All Competitive Exams  

💥 Also Read: 06 October 2021 Detailed daily Current Affairs in Kannada for All Competitive Exams  

💥 Click here to Read Daily Current Affairs in Kannada  

 

ರಾಸಾಯನ ಶಾಸ್ತ್ರ ನೊಬೆಲ್ ಪ್ರಕಟ

2021 ನೇ ಸಾಲಿನ ರಾಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಕಟಿಸಲಾಗಿದ್ದು, “ಜರ್ಮನಿಯ ಬೆಂಜಮಿನ್ ಲಿಸ್ಟ್” ಮತ್ತು ಅಮೆರಿಕದ ಡೇವಿಡ್ ಮೆಕ್‌ಮಿಲನ್” ಭಾಜನರಾಗಿದ್ದಾರೆ.

ಪರಮಾಣು ರಚನೆಗಾಗಿ ಅತ್ಯಪೂರ್ವ ಹೊಸ ಪರಿಸರ ಸ್ನೇಹಿ ಸಾಧನ ಕಂಡುಹಿಡಿದಿರುವುದಕ್ಕಾಗಿ ಈ ಪಾರಿತೋಷಕವನ್ನು ಪ್ರಕಟಿಸಲಾಗಿದೆ.

* ಅನೇಕ ಸಂಶೋಧನಾ ವಲಯಗಳು ಹಾಗೂ ಕೈಗಾರಿಕೆಗಳು ಪರಮಾಣು ರಚನೆ ಮಾಡುವ ರಾಸಾಯನಿಕ ಶಾಸ್ತ್ರದ ಸಾಮರ್ಥ್ಯವನ್ನು ಅವಲಂಬಿಸಿರುತ್ತವೆ. ಇಂತಹ ಸಾಮರ್ಥ್ಯದಿಂದ ಸ್ಥಿತಿ ಸ್ಥಾಪಕತ್ವ ಹಾಗೂ ಬೆಲೆಬಾಳುವ ವಸ್ತುಗಳನ್ನು ತಯಾರಿಸಲು ಹಾಗೂ ಬ್ಯಾಟರಿಗಳಲ್ಲಿ ಇಂಧನ ದಾಸ್ತಾನು ಮಾಡಲು & ರೋಗದ ಪ್ರಗತಿಯನ್ನು ತಡೆಯಲು ಅನುಕೂಲವಾಗಲಿದೆ.

ರಾಸಾಯನ ಶಾಸ್ತ್ರ ನೊಬೆಲ್

* ಮೊದಲ ಪ್ರಶಸ್ತಿ - 1901

2020 ನೇ ಸಾಲಿನ ಪ್ರಶಸ್ತಿ ವಿಜೇತರು

1. ಜೆನ್ನಿಫರ್ ಡಾಡ್ತಾ

2. ಇಮ್ಯಾನುಯೆಲ್ ಚಾರ್ಪೆಂಟಿಯರ್


ಗೋಯಿಂಗ್ ಅಪ್ ಕಾರಂತ' ಕೃತಿ ಬಿಡುಗಡೆಗೆ ಸಿದ್ಧತೆ

 

ಕಡಲ ತೀರದ ಭಾರ್ಗವ ಎಂದೇ ಪರಿಚಿತರಾದ ಡಾ.ಕೆ.ಶಿವರಾಮ ಕಾರಂತ ಅವರ ಜೀವನ ಚರಿತ್ರೆ ಕುರಿತು ಅವರ ಮಕ್ಕಳು ಬರೆದಿರುವ “ಗೋಯಿಂಗ್ ಅಪ್ ಕಾರಂತ” ಕೃತಿ ಬಿಡುಗಡೆಗೆ ಸಿದ್ಧತೆಗೊಂಡಿದೆ. ಶಿವರಾಮ ಕಾರಂತ ಅವರ ಮಕ್ಕಳಾದ ಪರಿಸರ ತಜ್ಞ ಉಲ್ಲಾಸ ಕಾರಂತ, ಮಾಳವಿಕಾ ಕಪೂರ್ ಹಾಗೂ ಕ್ಷಮ್‌ರಾವ್ ಅವರು ಈ ಕೃತಿಯನ್ನು ರಚಿಸಿದ್ದಾರೆ. ಈ ಪುಸ್ತಕವನ್ನು “ವೆಸ್ಟ್‌ಲ್ಯಾಂಡ್ ಪ್ರಕಾಶನ” ದ ವತಿಯಿಂದ ಪ್ರಕಟಿಸಲಾಗಿದೆ.  ಶಿವರಾಮ ಕಾರಂತ ಕಡಲತೀರದ ಭಾರ್ಗವ, “ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ ಅನುವಾದಕರಾಗಿ ಖ್ಯಾತಿ ಹೊಂದಿದ್ದಾರೆ.

ಪ್ರಮುಖ ಕೃತಿಗಳು

  • 1. ರಾಷ್ಟ್ರಗೀತೆ ಸುಧಾಕರ
  • 2. ಸೀಳವನಗಳು
  • 3. ಅದೇ ಊರು ಅದೇ ಮರ
  • 4. ಮೈ ಮನಗಳ ಸುಳಿಯಲ್ಲಿ
  • 5. ಮೂಕಜ್ಜಿಯ ಕನಸುಗಳು
  • 6. ಹುಚ್ಚು ಮನಸಿನ ಹತ್ತು ಮುಖಗಳು

 

ಪ್ರಶಸ್ತಿಗಳು

  • 1. ಜ್ಞಾನಪೀಠ ಪ್ರಶಸ್ತಿ - 1977 - ಮೂಕಜ್ಜಿಯ ಕನಸುಗಳು
  • 2. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ - 2011
  • 3. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ - 1958 (ಯಕ್ಷಗಾನ ಬಯಲಾಟ)
  • 4. ಪಂಪ ಪ್ರಶಸ್ತಿ - 1992
  • 5. ತುಳಸಿ ಸಮ್ಮಾನ್ ಪ್ರಶಸ್ತಿ (ಮಧ್ಯಪ್ರದೇಶ) - 1990

 

ಸುಂದರ್ ಲಾಲ್ ಹೋರಾ ಪ್ರಶಸ್ತಿ ಪ್ರಕಟ

 

ಭಾರತೀಯ ರಾಷ್ಟ್ರೀಯ ವಿಜ್ಞಾನ ಅಕಾಡೆಮಿಯ 2020ನೇ ಸಾಲಿನ “ಸುಂದರ್ ಲಾಲ್ ಹೋರಾ” ಪ್ರಶಸ್ತಿಗೆ ಬೆಂಗಳೂರು ವಿವಿಯು ಮಾಜಿ ಕುಲಪತಿ ಪ್ರೊ.ಎಚ್.ವಿ.ರಂಗನಾಥ್ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮೌಲ್ಯಮಾಪನ & ಮಾನ್ಯತೆ ಮಂಡಳಿಯ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ. ವಂಶವಾಹಿ & ವಿಕಾಸದ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಹಲವಾರು ಲೇಖನಗಳನ್ನು ಪ್ರಕಟಪಡಿಸಿದ್ದರು.

 

ಅಮೇರಿಕ ಅಂಚೆ ಕಚೇರಿಗೆ ಸಂದೀಪ್ ಸಿಂಗ್ ಹೆಸರು ಮರುನಾಮಕರಣ

 

ಸೇವೆಯಲ್ಲಿದ್ದಾಗಲೆ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಇಂಡೋ-ಅಮೇರಿಕನ್ ಪೊಲೀಸ್ ಅಧಿಕಾರಿ ಹೆಸರನ್ನು ಅಂಚೆ ಕಚೇರಿಗೆ ಮರುನಾಮಕರಣ ಮಾಡುವ ಮೂಲಕ ಅಮೇರಿಕ ಸರ್ಕಾರ ಗೌರವ ಸಲ್ಲಿಸಿದೆ. ಟೆಕ್ಸಾಸ್ ಹೂಸ್ಟನ್ ನಲ್ಲಿರುವ ಹೊವೆಲ್ ರಸ್ತೆಯ ಅಂಚೆ ಕಚೇರಿ ದಿವಂಗತ ಹಿರಿಯ ಅಧಿಕಾರಿ “ಸಂದೀಪ್ ಸಿಂಗ್ ಧಲಿವಾಲ್” ಅವರ ಹೆಸರು ಮರುನಾಮಕರಣ ಮಾಡಲಾಗಿದೆ.

* ಸಂದೀಪ್ ಸಿಂಗ್ ಧಲಿವಾಲ್ ಅವರು ಸೆಪ್ಟಂಬರ್ 27, 2019 ರಂದು ಟೆಕ್ಸಾಸ್ ಹ್ಯಾರಿಸ್ ಕೌಂಟಿಯಲ್ಲಿ ಟ್ರಾಫಿಕ್ ಸ್ಟಾಪ್ ಕೆಲಸದಲ್ಲಿ ತೊಡಗಿದ್ದಾಗ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದರು. ಸಿಖ್ ಧರ್ಮದ ಟರ್ಬನ್ ಧರಿಸಿ ಪೋಲೀಸ್ ಸೇವೆ ಸಲ್ಲಿಸಿದ ಮೊದಲ ಅಧಿಕಾರಿಯಾಗಿದ್ದರು.

 

ವಿಶ್ವದ ಮೊದಲ ಮಲೇರಿಯಾ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಸಮ್ಮತಿ

 

ಮಕ್ಕಳಿಗಾಗಿ ತಯಾರಿಸಲಾಗಿರುವ ವಿಶ್ವದ ಮೊದಲ ಮಲೇರಿಯಾ ಲಸಿಕೆಗೆ “ವಿಶ್ವ ಆರೋಗ್ಯ ಸಂಸ್ಥೆ” ಇತ್ತೀಚೆಗೆ ಅನುಮೋದನೆ ನೀಡಿದೆ.

* ಬ್ರಿಟನ್‌ನ ಸ್ಯಾಕ್ಸೊಸ್ಮಿತ್ ಕ್ಸೈನ್ ಕಂಪೆನಿ ಈ ಲಸಿಕೆ ಉತ್ಪಾದಿಸುತ್ತದೆ. ಇದನ್ನು ಪ್ರಾಯೋಗಿಕವಾಗಿ ಆಫ್ರಿಕಾದ ದೇಶಗಳಾದ ಘಾನಾ, ಕಿನ್ಯಾ & ಮಲಾವಿಗಳಲ್ಲಿ 2019 ರಲ್ಲಿ ಆರಂಭಿಸಲಾಗಿತ್ತು ಈ ಯೋಜನೆ ಯಶಸ್ವಿಯಾಗಿದ್ದರಿಂದ ವಿಶ್ವ ಆರೋಗ್ಯ ಸಂಸ್ಥೆ” ಮಲೇರಿಯಾ ಲಸಿಕೆಗೆ ಮಾನ್ಯತೆ ನೀಡಿದೆ.

* ಇದು ಸಹ ಕೋವಿಡ್ ಲಸಿಕೆಯಂತೆ ಶಕ್ತಿಶಾಲಿಯಾದ ಲಸಿಕೆಯಾಗಿದ್ದು, ಮಲೇರಿಯಾ ವಿರುದ್ಧ ಹೋರಾಡಲು ಸಹಕಾರಿಂಟಾಗಲಿದೆ. ಆದರೆ ಸಂಪೂರ್ಣವಾಗಿ ಹೋಗಲಾಡಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ಡಬ್ಲ್ಯುಹೆಚ್ಓ ಸ್ಪಷ್ಟಪಡಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ:

  • ಸ್ಥಾಪನೆ – ಏಪ್ರಿಲ್ 7, 1948
  • ಕೇಂದ್ರ ಕಚೇರಿ - ಜಿನೇವಾ (ಸ್ವಿಟ್ಟರ್‌ಲೆಂಡ್)
  • ಅಧ್ಯಕ್ಷ - ಡಾ. ತೆಡೋಸ್ ಅಧಾನಮ್ ಗೆಬಿಯೆಸಸ್

 

MADAD APP ಬಿಡುಗಡೆ

 

ಆಪ್ ಅನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಭಿವೃದ್ಧಿ ಪಡಿಸಿದೆ. ವಿದೇಶಗಳಲ್ಲಿ ಭಾರತೀಯ ರಾಯಭಾರಿ ಕಚೇರಿಗಳು ಒದಗಿಸುವ ಸೇವೆಯ ಮಾಹಿತಿಯನ್ನು ಈ ಆಪ್ ಬಳಕೆದಾರರಿಗೆ ನೀಡುತ್ತದೆ.

ವಿದೇಶಗಳಲ್ಲಿ ನೆಲೆಸಿರುವ ಭಾರತೀಯರಿಗೆ ಈ ಆಪ್ ಹೆಚ್ಚು ಉಪಯುಕ್ತವಾಗಿದೆ. ಭಾರತೀಯ ಕೆಲಸಗಾರರ ಮೇಲಾಗುವ ದೌರ್ಜನ್ಯ ಇತ್ಯಾದಿ ವಿಷಯಗಳ ಬಗ್ಗೆ ಗಮನಹರಿಸಲು ಇದು ನೆರವಾಗುತ್ತದೆ. ಆದರೆ, ವೀಸಾಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಇದು ನೀಡುವುದಿಲ್ಲ.

 ಇವುಗಳನ್ನೂ ಓದಿ 












No comments:

Post a Comment

Important Notes

Random Posts

Important Notes

Popular Posts

Top-50 General Knowledge (GK) Question Answers in Kannada for All Competitive Exams-08

Top-50 General Knowledge (GK) Question Answers in  Kannada for All Competitive Exams-08 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

19th January 2025 Daily Current Affairs Quiz in Kannada for All Competitive Exams

          19th January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-19th January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

18th January 2025 Daily Current Affairs Quiz in Kannada for All Competitive Exams

          18th January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-18th January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...