Breaking

Saturday, 6 November 2021

06 November 2021 Detailed Daily Current Affairs in Kannada for All Competitive Exams

             

06 November 2021 Detailed Daily Current Affairs in Kannada for All Competitive Exams


Daily Detailed Current Affairs in Kannada for All Competitive Exams www.kpscnotesmcqs.in



ಹಾಯ್ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!! ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಪ್ರಚಲಿತ ವಿದ್ಯಮಾನಗಳ ಅರಿವು ಇರಲೇಬೇಕು. ತನ್ನ ಸಮುದಾಯಸಮಾಜದಲ್ಲಿ ಪ್ರತಿ ನಿತ್ಯ ನಡೆಯುವ ಪ್ರತಿಯೊಂದು ಮಹತ್ವದ ಘಟನೆಗಳ ಅರಿವು ಎಲ್ಲರಲ್ಲಿಯೂ ಇರಲೇಬೆಕು. ಅದರಲ್ಲೂ ವಿಶೇಷವಾಗಿ ಸರಕಾರಿ ಸೇವೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಈ ಕುರಿತು ಕನಿಷ್ಟ ಸಾಮಾನ್ಯ ಜ್ಞಾನ ಇರಲೇಬೇಕು. ಆದ್ದರಿಂದ ಪ್ರಚಲಿತ ವಿದ್ಯಮಾನಗಳ/ಪ್ರಚಲಿತ ಘಟನೆಗಳ ಕುರಿತಾದ ಮಹತ್ವದ ವಿಷಯಗಳನ್ನು ಸಂಗ್ರಹಿಸಿ KPSC NOTES MCQS ಜಾಲತಾಣ ನೀಡುತ್ತಿದೆ. ಪ್ರಚಲಿತ ವಿದ್ಯಮಾನಗಳ ಮಹತ್ವದ ಅಂಶಗಳುಪ್ರತಿದಿನದ ಪ್ರಚಲಿತ ವಿದ್ಯಮಾನಗಳನ್ನು ಹಲವಾರು ಮೂಲಗಳಿಂದ ಸಂಗ್ರಹಿಸಿ ನೀಡುತ್ತಿದ್ದೇವೆ.

💥 Click here to Read Daily Current Affairs in Kannada  

ಸುದ್ದಿಯಲ್ಲಿರುವ ಹಸಿರು ಪಟಾಕಿ


ಹಸಿರು ಪಟಾಕಿ ಎಂಬುದು ರಾಷ್ಟ್ರೀಯ ಪರಿಸರ ಎಂಜಿನೀಯರಿಂಗ್ ಸಂಶೋಧನಾ ಸಂಸ್ಥೆಯ ಪರಿಕಲ್ಪನೆ. ಪರಿಸರ ಮಾಲಿನ್ಯ ತಗ್ಗಿಸುವ ಉದ್ದೇಶದಿಂದ, 'ಹಸಿರು ಪಟಾಕಿ' ಬಳಕೆಗೆ ಅನುಮತಿ ನೀಡಲಾಗಿದೆ. ಹಸಿರು ಪಟಾಕಿಗಳು ರಾಸಾಯನಿಕಗಳನ್ನು ಹೊಂದಿರುವುದಿಲ್ಲ. ಇದರರ್ಥ ಕಡಿಮೆ ಮಾಲಿನ್ಯ ಹೊರಸೂಸುವಿಕೆಯಿಂದಾಗಿ ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಾಗುತ್ತದೆ.


ಸಾಮಾನ್ಯ ಪಟಾಕಿಗಳಿಗಿಂತ ಹಸಿರುಪಟಾಕಿಗಳು ಭಿನ್ನ. ಅಲ್ಯೂಮಿನಿಯಂ, ಲಿಥಿಯಂ, ಬೇರಿಯಂ, ಸೀಸ, ಅರ್ಸೆನಿಕ್, ಪೊಟ್ಯಾಷಿಯಂ ನೈಟ್ರೇಟ್ ಅಥವಾ ಕಾರ್ಬನ್ ಮೊದಲಾದ ರಾಸಾಯನಿಕಗಳನ್ನು ಹಸಿರು ಪಟಾಕಿಗಳು ಹೊಂದಿರುವುದಿಲ್ಲ. ಹೀಗಾಗಿ ಇವು ಪರಿಸರದ ಮೇಲೆ ಹಾನಿ ಮಾಡಬಹುದಾದ ಹಾನಿಯ ಪ್ರಮಾಣ ಕಡಿಮೆ.


* ಹಸಿರು ಪಟಾಕಿಗಳು ಪರಿಸರ & ಮನುಷ್ಯನ ಆರೋಗ್ಯದ ಮೇಲೆ ಕಡಿಮೆ ಅಪಾಯ ಉಂಟುಮಾಡುತ್ತವೆ. ಮಾಲಿನ್ಯ ಕಡಿಮೆ ಮಾಡುವ ಉದ್ದೇಶದಿಂದ ಸಾಂಪ್ರದಾಯಿಕ ಪಟಾಕಿಗಳಿಗೆ ಬಳಸುವ ಕಚ್ಚಾವಸ್ತುಗಳಿಗೆ ಬದಲಾಗಿ, ಪರ್ಯಾಯ ಕಚ್ಚಾ ವಸ್ತುಗಳಿಂದ ಇವುಗಳನ್ನು ತಯಾರಿಸಲಾಗುತ್ತದೆ.

* ಸಾಮಾನ್ಯ ಪಟಾಕಿಗಳಿಗೆ ಹೋಲಿಸಿದರೆ ಹಸಿರು ಪಟಾಕಿಗಳು ಶೇ. 30ರಷ್ಟು ಕಡಿಮೆ ಮಾಲಿನ್ಯ ಉಂಟು ಮಾಡುತ್ತವೆ.


* ಬೇರಿಯಂ ನೈಟ್ರೇಟ್ ರಾಸಾಯನಿಕವು ಭಾರೀ ಹೊಗೆ ಹೊರಸೂಸುತ್ತದೆ. ಆದರೆ, ಹಸಿರು ಪಟಾಕಿಗಳಿಗೆ ಬೇರಿಯಂ ನೈಟ್ರೇಟ್‌ನ್ನು ಕಡಿಮೆ ಪ್ರಮಾಣದಲ್ಲಿ ಬಳಸಲಾಗುತ್ತದೆ ಅಥವಾ ಈ ರಾಸಾಯನಿಕ ಇಲ್ಲದೆಯೇ ಪಟಾಕಿ ತಯಾರಿಸುವುದರಿಂದ ಹೊಗೆ ಹೊರಸೂಸುವಿಕೆ ಇರುವುದಿಲ್ಲ.

 ಇವುಗಳನ್ನೂ ಓದಿ 




* ಹಸಿರು ಪಟಾಕಿಗಳು ವಾಯುಮಾಲಿನ್ಯವನ್ನು ಕಡಿಮೆ ಮಾಡುವುದು ಮಾತ್ರವಲ್ಲ. ಶಬ್ದ ಉತ್ಪತ್ತಿ ಶಬ್ದ ಉತ್ಪತ್ತಿ ಪ್ರಮಾಣದಲ್ಲೂ ಗಮನಾರ್ಹ ಎನಿಸಿವೆ. ಸಾಮಾನ್ಯ ಪಟಾಕಿಗಳು ಸುಮಾರು 160 ಡೆಸಿಬಲ್ ಶಬ್ದ ಹೊರಸೂಸುತ್ತವೆ. ಆದರೆ, ಹಸಿರು ಪಟಾಕಿಗಳು 110ರಿಂದ 125 ಡೆಸಿಬಲ್ ಶಬ್ದ ಮಾಡುತ್ತವೆ. ಹೀಗಾಗಿ ಕಿವಿಗಳಿಗೆ ಪಟಾಕಿ ಸದ್ದಿನಿಂದ ಆಗುವ ಅಪಾಯ ಕೊಂಚ ಕಡಿಮೆಯಾಗುತ್ತದೆ.

* ಹಸಿರು ಪಟಾಕಿಗಳಲ್ಲಿ ಮೂರು ವಿಧಗಳಿವೆ. ಸೇಫ್ ವಾಟರ್ ರಿಲೀಸರ್‌, ಸೇಫ್ ಥರ್ಮ್ಮೇಟ್ ಕ್ರ್ಯಾಕರಿ & ಸೇಫ್ ಮಿನಿಮಲ್ ಅಲ್ಯೂಮಿನಿಯಂ ಕ್ಯಾಕರ್ಸ್, ಹಸಿರು ಪಟಾಕಿ ತಯಾರಕರು ಸಿಎಸ್‌ಐಆರ್‌ ಎನ್‌ಇಇಆರ್‌ಐ ಮಾನದಂಡಗಳ ಪ್ರಕಾರ ಉತ್ಪಾದನೆ ಮಾಡುಬೇಕಾಗುತ್ತದೆ.

* ಸರ್ಕಾರದಿಂದ ನೋಂದಣಿಯಾಗಿರುವ ಮಾರಾಟಗಾರರಿಂದ ಅಥವಾ ಆನ್‌ಲೈನ್‌ನಲ್ಲಿ ಹಸಿರು ಪಟಾಕಿ ಖರೀದಿಸಬಹುದು. ಮಾರಕಟ್ಟೆಯಲ್ಲಿರುವ ಯಾವುದು 'ಹಸಿರು ಪಟಾಕಿ' ಎಂದು ಗುರುತಿಸಲು ಜನರಿಗೆ ಅನುಕೂಲವಾಗಲಿ ಎಂದು ಪೊಟ್ಟಣಗಳ ಮೇಲೆ ಲೋಗೊ ಮುದ್ರಿಸಲಾಗಿರುತ್ತದೆ.ಜೊತೆಗೆ ಕ್ಯೂಆರ್ ಕೋಡ್ ಸಹ ಇದ್ದು, ಜನರು ಅವುಗಳನ್ನು ಸ್ಕ್ಯಾನ್ ಮಾಡಿ ಗುರುತಿಸಬಹುದು.

* ಹಸಿರು ಪಟಾಕಿಗಳು ಮಾಲಿನ್ಯ ತಗ್ಗಿಸುತ್ತವೆ ಎಂಬ ವಾದವನ್ನು ಪರಿಸರವಾದಿಗಳು ಒಪ್ಪುವುದಿಲ್ಲ. 'ಶೇ. 30ರಷ್ಟು ಮಾಲಿನ್ಯ ತಗ್ಗುತ್ತದೆ ಎಂಬುದು ಗಮನಾರ್ಹ ವಿಷಯವಲ್ಲ. ಪಟಾಕಿಗಳು ವಾಯು ಮಾಲಿನ್ಯಕ್ಕೆ ಕಾರಣವೆಂದು ತಿಳಿದಿದ್ದರೂ ಅವುಗಳನ್ನು ಸಿಡಿಸಲು ಏಕೆ ಅವಕಾಶ ನೀಡಲಾಗುತ್ತಿದೆ ಎಂದು ಅವರು ಪ್ರಶ್ನಿಸುತ್ತಾರೆ.

'ಕೃತಕ ಬುದ್ಧಿವಂತಿಕೆ, ರೋಬೋಟಿಕ್ಸ್ ತಂತ್ರಜ್ಞಾನ ಬಲಪಡಿಸಲು ಒಪ್ಪಂದ'


'ರಾಜ್ಯದಲ್ಲಿ ಕೃತಕ ಬುದ್ಧಿವಂತಿಕೆ, ರೋಬೋಟಿಕ್ಸ್ ತಂತ್ರಜ್ಞಾನವನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಬೆಂಗಳೂರು ಮೂಲದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ರೋಬೋಟಿಕ್ ಟೆಕ್ನಾಲಜೀಸ್ ಪಾರ್ಕ್ (ಆರ್ಟ್ ಪಾರ್ಕ್) ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.


ಕೋವಿಡ್ ಸಾಂಕ್ರಾಮಿಕವು ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ಮತ್ತೊಮ್ಮೆ ತೋರಿಸಿದೆ ಮಾನವೀಯತೆಗೆ ಸಹಾಯ ಮಾಡುವ ಮಾರ್ಗಗಳತ್ತ ಗಮನಹರಿಸುವಂತೆ ಜಗತ್ತನ್ನು ನಿರ್ದೇಶಿಸಿದೆ. ನಮ್ಮ ದೇಶದ ಪ್ರದೇಶಗಳಿಗೆ ಉತ್ತಮ & ಕೈಗೆಟುಕುವ ಸೇವೆಗಳನ್ನು ಒದಗಿಸಲು ತಂತ್ರಜ್ಞಾನದ ಸಹಾಯದಿಂದ ಆರೋಗ್ಯ, ಕೃಷಿ, ಶಿಕ್ಷಣ ಮುಂತಾದ ಎಲ್ಲ ನಿರ್ಣಾಯಕ ಕ್ಷೇತ್ರಗಳನ್ನು ಪರಿವರ್ತಿಸಬಹುದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.


ಆತ್ಮ ನಿರ್ಭರ ಭವಿಷ್ಯಕ್ಕಾಗಿ ಭಾರತಕ್ಕೆ ನಿರ್ದಿಷ್ಟವಾದ ಸಮಸ್ಯೆಗಳಿಗೆ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ನಾವು ಎದುರು ನೋಡುತ್ತಿದ್ದೇವೆ. ಕೃತಕ ಬುದ್ಧಿವಂತಿಕೆ, ರೋಬೋಟಿಕ್ಸ್ & ಸ್ವಾಯತ್ತ ವ್ಯವಸ್ಥೆಗಳು ಡಿಜಿಟಲ್ ಆರ್ಥಿಕತೆಯ ಚಕ್ರಗಳನ್ನು ಚಾಲನೆ ಮಾಡುವ ಭವಿಷ್ಯದ ತಂತ್ರಜ್ಞಾನಗಳಾಗಿರಲಿವೆ. ಈ ಸೌಲಭ್ಯಗಳು ಹೊಸ ಸ್ಪಾರ್ಟ್ ಅಪ್‌ಗಳನ್ನು ರಚಿಸಲು & ಉತ್ತಮ ಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸಲು ಪ್ರಮುಖ ಸಾಧನಗಳಾಗುತ್ತದೆ ಎಂದು ಅವರು ಹೇಳಿದರು.


ರಾಜ್ಯ ಸರಕಾರ & ವಿಜ್ಞಾನ & ತಂತ್ರಜ್ಞಾನ ಇಲಾಖೆ, ಸರಕಾರದಿಂದ 60 ಕೋಟಿ ರೂ. ಅನುದಾನವನ್ನು ಸ್ವೀಕರಿಸಲು ನಾವು ಸಂತೋಷ ಪಡುತ್ತೇವೆ. 5 ವರ್ಷಗಳಲ್ಲಿ ಆರ್ಟ್ಪಾರ್ಕ್‌ಗೆ ಹೆಚ್ಚುವರಿ 170 ಕೋಟಿ ರೂ.ಗಳನ್ನು ಒದಗಿಸಲು ಬದ್ಧವಾಗಿರುವ ಭಾರತ ಎಂದು ಆರ್ಟ್ಪಾರ್ಕ್‌ನ ಸಿಇಒ & ಸಹ ಸಂಸ್ಥಾಪಕ ಉಮಾಕಾಂತ್ ಸೋನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುನೀತ್‌ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ


ಚಿತ್ರದುರ್ಗ ಬಸವ ಕೇಂದ್ರ ಮುರುಘಾಮಠದಿಂದ ಕೊಡಮಾಡುವ 2021-22ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಇತ್ತೀಚೆಗೆ ಅಗಲಿದ ನಟ ಪುನೀತ್ ರಾಜ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಐದು ಲಕ್ಷ ರೂ. ನಗದು ಹಾಗೂ ಫಲಕ ಒಳಗೊಂಡಿದೆ.


ಪುನೀತ್ ರಾಜ್‌ಕುಮಾರ್ ಅವರ ಸೇವೆ, ಕನ್ನಡ ಬಗೆಗಿನ ಕಾಳಜಿಯನ್ನು ಪರಿಗಣಿಸಿ ಮರಣೋತ್ತರ ಬಸವಶ್ರೀ ಘೋಷಿಸಲಾಗಿದೆ. ಈ ಮೊದಲು ಡಾ. ಎಂ. ಎಂ. ಕಲಬುರ್ಗಿ, ರೈತ ಸಂಘದ ನಾಯಕ ಪ್ರೊ. ನಂಜುಂಡಸ್ವಾಮಿ ಅವರಿಗೆ ಮರಣೋತ್ತರ ಬಸವಶ್ರೀ ಕೊಡಲಾಗಿತ್ತು. ಇದೀಗ ಪುನೀತ್ ರಾಜ್‌ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.


ಬಸವಶ್ರೀ ಪ್ರತಿಷ್ಠಿತ ಪ್ರಶಸ್ತಿ


ಬಸವಶ್ರೀ ರಾಜ್ಯದಲ್ಲಿಯೇ ಪ್ರತಿಷ್ಠಿತ ಪ್ರಶಸ್ತಿಯಾಗಿದೆ. ಈ ಮೊದಲು ಆಂಧ್ರದ ಕ್ರಾಂತಿಕಾರಿ ಕವಿ ಗದ್ದರ್‌, ನಟಿ ಶಬಾನಾ ಅಜ್ಜಿ, ನರ್ಮದಾ ಆಂದೋಲನದ ಹೋರಾಟಗಾರ್ತಿ ವಂದನಾ ಶಿವಾ, ಅಂತರರಾಷ್ಟ್ರೀಯ ಮಹಿಳಾ ಹೋರಾಟಗಾರ್ತಿ ಮಲಾಲ, ಬೌದ್ಧ ಗುರು ದಲೈಲಾಮಾ, ಸಾಹಿತಿ ಚಂದ್ರಶೇಖರ ಪಾಟೀಲ, ನೈಸರ್ಗಿಕ ಕೃಷಿ ತಜ್ಞ ಸುಭಾಷ್ ಪಾಳೇಕಾರ್, ಪ್ರಕೃತಿ ಪ್ರೇಮಿ ಮಳವಳ್ಳಿಯ ಕಾಮೇಗೌಡ, ಶ್ರೀಲಂಕಾದ ಡಾ. ಹರಿಯರತ್ನ, ಬೀದರ್‌ನ ಶಿವಶರಣ ಬೆಲ್ದಾಳ ಸೇರಿದಂತೆ 20 ಮಂದಿಗೆ ಬಸವಶ್ರೀ ನೀಡಲಾಗಿತ್ತು. ಇದೀಗ 21ನೇ ಬಸವಶ್ರೀ ಪ್ರಶಸ್ತಿಗೆ ನಟ ಪುನೀತ್ ರಾಜ್‌ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಹದಿನೈದು ದಿನಗಳ ಹಿಂದೆಯಷ್ಟೇ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಸರೋದ್ ಮಾಂತ್ರಿಕ ಪಂಡಿತ್ ರಾಜೀವ ತಾರಾನಾಥ್ ಹಾಗೂ ಬಾಹ್ಯಾಕಾಶ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಬಸವಶ್ರೀ ಪ್ರಶಸ್ತಿ ನೀಡಲಾಗಿತ್ತು.


ಡೇಮರ್‌ ಅವರ 'ದಿ ಪ್ರಾಮಿಸ್' ಕೃತಿಗೆ ಬೂಕರ್


ದಕ್ಷಿಣ ಆಫ್ರಿಕಾದ ಡೇಮನ್ ಗಾಲ್ಗಟ್ ಅವರ ಕಾದಂಬರಿ 'ದಿ ಪ್ರಾಮಿಸ್' ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿನ ವರ್ಣಭೇದ ನೀತಿ & ಬಿಳಿಯ ವರ್ಣದ ಕುಟುಂಬದ ಕಥೆಯನ್ನು ಕಾದಂಬರಿ ಒಳಗೊಂಡಿದೆ. ಸಂಕಷ್ಟದಲ್ಲಿರುವ ಆಫ್ರಿಕನ್ ಕುಟುಂಬ ಹಾಗೂ ಕಪ್ಪುವರ್ಣದ ವ್ಯಕ್ತಿಗೆ ಉದ್ಯೋಗ ನೀಡುವ ಭರವಸೆ ಸುಳ್ಳಾಗುವುದು-ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿಯ ಸುತ್ತಲಿನ ಕಥೆಯನ್ನು ಅಡಕವಾಗಿಸಿಕೊಂಡಿರುವ 'ದಿ ಪ್ರಾಮಿಸ್' ಕೃತಿಗೆ ಬ್ರಿಟನ್‌ನ ಬೂಕರ್ ಪ್ರಶಸ್ತಿ ಸಂದಿದೆ. ಪ್ರಶಸ್ತಿಯು 50,000 ಪೌಂಡ್ (ಸುಮಾರು 50 ಲಕ್ಷ ರೂ.) ಬಹುಮಾನವನ್ನು ಒಳಗೊಂಡಿದೆ.


* ಡೇಮನ್ ಗಾಲ್ಗಟ್ ಅವರ ಕಾದಂಬರಿಯು ಬೂಕರ್ ಪ್ರಶಸ್ತಿಯ ಆಯ್ಕೆ ಪಟ್ಟಿಗೆ ಈ ಹಿಂದೆಯೂ ಎರಡು ಬಾರಿ ಸೇರ್ಪಡೆಯಾಗಿತ್ತು. ಆದರೆ, ಮೂರನೇ ಬಾರಿಗೆ ಪ್ರಶಸ್ತಿ ಒಲಿದಿದೆ.

* 2003ರಲ್ಲಿ 'ದಿ ಗುಡ್ ಡಾಕ್ಟರ್' ಹಾಗೂ 2010ರಲ್ಲಿ 'ಇನ್ ಎ ಸ್ಟ್ರೇಂಜ್‌ ರೂಂ' ಕೃತಿಗಳು ಆಯ್ಕೆ ಪಟ್ಟಿಗೆ ಸೇರ್ಪಡೆಯಾಗಿದ್ದವು.

* 2021ರ ನೊಬೆಲ್ ಸಾಹಿತ್ಯ ಪುರಸ್ಕಾರ ಪಡೆದ ಸಾಹಿತಿ ಅಬ್ದುಲ್ ರಜಾಕ್ ಗುರ್ನಾ ಸಹ ಆಫ್ರಿಕಾದವರು ಎಂಬುದನ್ನು ಡೇಮನ್ ಗಾಲ್ಗಟ್ ಈ ಸಂದರ್ಭದಲ್ಲಿ ನೆನಪಿಸಿಕೊಂಡಿದ್ದಾರೆ. 1969 ರಿಂದ ಇಂಗ್ಲಿಷ್‌ನಲ್ಲಿ ಪ್ರಕಟವಾಗಿರುವ ಕೃತಿಗಳಿಗೆ ಬೂಕರ್ ಪ್ರಶಸ್ತಿ ನೀಡಲಾಗುತ್ತಿದೆ.

 ಇವುಗಳನ್ನೂ ಓದಿ 



 ಇವುಗಳನ್ನೂ ಓದಿ 

💥 Also Read: 01 October 2021 Detailed daily Current Affairs in Kannada for All Competitive Exams   

💥 Also Read: 02 October 2021 Detailed daily Current Affairs in Kannada for All Competitive Exams  

💥 Also Read: 03 October 2021 Detailed daily Current Affairs in Kannada for All Competitive Exams  

💥 Also Read: 04 October 2021 Detailed daily Current Affairs in Kannada for All Competitive Exams  

💥 Also Read: 05 October 2021 Detailed daily Current Affairs in Kannada for All Competitive Exams  

💥 Also Read: 06 October 2021 Detailed daily Current Affairs in Kannada for All Competitive Exams  

💥 Also Read: 07 October 2021 Detailed daily Current Affairs in Kannada for All Competitive Exams  

💥 Also Read: 08 October 2021 Detailed daily Current Affairs in Kannada for All Competitive Exams  

💥 Also Read: 09 October 2021 Detailed daily Current Affairs in Kannada for All Competitive Exams  

💥 Also Read: 10 October 2021 Detailed daily Current Affairs in Kannada for All Competitive Exams  

💥 Also Read: 11 October 2021 Detailed daily Current Affairs in Kannada for All Competitive Exams  

💥 Also Read: 12 October 2021 Detailed daily Current Affairs in Kannada for All Competitive Exams  

💥 Also Read: 13 October 2021 Detailed daily Current Affairs in Kannada for All Competitive Exams  

💥 Also Read: 14, 15,  16 and 17 October 2021 Detailed daily Current Affairs in Kannada for All Competitive Exams  

💥 Also Read: 18 October 2021 Detailed daily Current Affairs in Kannada for All Competitive Exams  

💥 Click here to Read Daily Current Affairs in Kannada  

 














No comments:

Post a Comment

Important Notes

Random Posts

Important Notes

Popular Posts

Top-100 General Knowledge (GK) Question Answers in Kannada for All Competitive Exams-01

Top-100 General Knowledge (GK) Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's E...

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು

ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು ಕರ್ನಾಟಕದ 180 ಕ್ಕೂ ಅಧಿಕ ವಚನಕಾರರು ಮತ್ತು ಅವರ ಅಂಕಿತನಾಮಗಳು , ಕರ್ನಾಟಕದ ಪ್ರಮುಖ ವಚನಕಾರರ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ನೇಹಿತರೇಈ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಕರ್ನಾಟಕದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಈ ಮಾಹಿತಿ ಉಪಯುಕ್ತವಾಗಿದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರೊಂದಿಗೂ ಶೇರ್ ಮಾಡಿ.. ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು: ಕನ್ನಡದ ವಚನಕಾರರು ಮತ್ತು ಅವರ ಅಂಕಿತ ನಾಮಗಳು 1 ಬಸವಣ್ಣ ಕೂಡಲ ಸಂಗಮದೇವ 2 ಅಲ್ಲಮ ಪ್ರಭು ಗುಹೇಶ್ವರ 3 ಚನ್ನಬಸವಣ್ಣ ಚನ್ನಕೂಡಲ ಸಂಗಮದೇವ 4 ಸಿದ್ದರಾಮ ಕಪಿಲಸಿದ್ದಮಲ್ಲಿಕಾರ್ಜುನ 5 ಅಜಗಣ್ಣ ಮಹಾಘನ ಸೋಮೇಶ್ವರ 6 ಅಂಬಿಗರ ಚೌಡಯ್ಯ ಅಂಬಿಗರ ಚೌಡಯ್ಯ 7 ಅಮುಗಿ ದೇವಯ್ಯ ಸಿದ್ದಸೋಮೇಶ್ವರ 8 ಆದಯ್ಯ ಸೌರಾಷ್ಟ್ರ ಸೋಮೇಶ್ವರ 9 ಅರಿವಿನ ಮಾರಿತಂದೆ ಸದಾಶಿವಮೂರ್ತಿ 10 ಅಂಗಸೋಂಕಿನ ಲಿಂಗತಂದೆ ಭೋಗಬಂಕೇಶ್ವರಲಿಂಗ 11 ಅಗ್ಘಾವಣಿ ಹಂಪಯ್ಯ ಹಂಪೆಯ ವಿರುಪಾ 12 ಅಗ್ಘಾವಣಿ ಹೊನ್...

16 ಫೆಬ್ರವರಿ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು

          16 ಫೆಬ್ರವರಿ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು  🌺 16 ಫೆಬ್ರವರಿ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2021 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021,   September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

19-10-2021 Daily Top-20 General Knowledge Question Answers Quiz for All Competitive Exams

  19-10-2021 Daily Top-20 General Knowledge Question Answers Quiz for All Competitive Exams 🌺 Latest KPSC All Competitive Exams (Quiz) Mock Test-2021 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Current Affairs 2021 Series Mock Test-01 Quiz  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021,   September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Today Top-10 General Knowledge Question Answers in Kannada for All Competitive Exams-23

Today Top-10 General Knowledge Question Answers in Kannada for All Competitive Exams-23 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teache...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

29th March 2025 Daily Current Affairs Quiz in Kannada for All Competitive Exams

          29th March 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-29th March 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Top-10 General Knowledge Question Answers Quiz for All Competitive Exams-02

  Top-10 General Knowledge Question Answers Quiz for All Competitive Exams-02 🌺 Latest KPSC All Competitive Exams (Quiz) Mock Test-2021 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ General Knowledge 2021 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021,   September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs