Breaking

Monday, 3 January 2022

03 ಜನೆವರಿ : ಬಿ. ಎಂ. ಶ್ರೀಕಂಠಯ್ಯನವರ ಜನ್ಮದಿನಾಚರಣೆ 03 January Birth Anniversary of Shri B. M.Shreekanthayya

03 ಜನೆವರಿ : ಬಿ. ಎಂ. ಶ್ರೀಕಂಠಯ್ಯನವರ ಜನ್ಮದಿನಾಚರಣೆ

03 ಜನೆವರಿ : ಬಿ. ಎಂ. ಶ್ರೀಕಂಠಯ್ಯನವರ ಜನ್ಮದಿನಾಚರಣೆ 03 January Birth Anniversary of Shri B. M.Shreekanthayya



ಬಿ. ಎಂ. ಶ್ರೀಕಂಠಯ್ಯನವರ ಜನನ:


> ಬಿ ಎಂ ಶ್ರೀ ಅವರು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸಂಪಿಗೆ ಎಂಬ ಹಳ್ಳಿಯಲ್ಲಿ 1884 ರ ಜನವರಿ 3 ರಲ್ಲಿ ಜನಿಸಿದರು.


ಬಿ. ಎಂ. ಶ್ರೀಕಂಠಯ್ಯನವರು ಪ್ರಸಿದ್ಧಿಯಾಗಿದ್ದು:

> ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ 20ನೇ ಶತಮಾನದ ಆದಿ ಭಾಗದಲ್ಲಿ ಕನ್ನಡಬಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ಕವಿ ಮತ್ತು ಸಾಹಿತಿ.

> ಸುಮಾರು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು. ಕನ್ನಡಕ್ಕೆ ಯಾವುದೇ ಉನ್ನತ ಸ್ಥಾನ-ಮಾನಗಳಿರಲಿಲ್ಲ. ಅಂತಹ ಸಮಯದಲ್ಲಿ ಕನ್ನಡವನ್ನು ಅದಕ್ಕಿರುವ ಒಂದು ನ್ಯಾಯವಾದ ಸ್ಥಾನವನ್ನು ದೊರಕಿಸಿ ಕೊಡಲೇಬೇಕು ಎಂದು ಆಶಿಸಿ, ತಮ್ಮ ಜೀವನವನ್ನು ಕನ್ನಡಕ್ಕಾಗಿ ಮುಡಿಪಾಗಿಟ್ಟವರು ಬಿ. ಎಂ. ಶ್ರೀಕಂಠಯ್ಯನವರು.

> ಧಾರವಾಡದಲ್ಲಿ 1911 ರಲ್ಲಿ ಶ್ರೀ ಯವರು ಕನ್ನಡ ಮಾತು ತಲೆಯೆತ್ತುವ ಬಗ್ಗೆ ಎಂಬ ಯುಗ ಪ್ರವರ್ತಕ ಕನ್ನಡ ಭಾಷಣವನ್ನು ಮಾಡಿದರು.

> ಜನವಾಣಿ ಬೇರು ಕವಿವಾಣಿ ಹೂವು ಎಂದು ಗರತಿಯ ಹಾಡುಗಳು ಕೃತಿಯ ಮುನ್ನುಡಿಯಲ್ಲಿ ಪ್ರಸಿದ್ಧಿ ಹೇಳಿಕೆ ಇದೆ.


ಬಿ. ಎಂ. ಶ್ರೀಕಂಠಯ್ಯನವರ ವೃತ್ತಿ ಜೀವನ :


> ಮೈಸೂರಿನ ಮಹಾರಾಜ ಕಾಲೇಜಿನಲ್ಲಿ 25 ವರ್ಷ ಸೇವೆ ಸಲ್ಲಿಸಿ 1930ರಲ್ಲಿ ಬೆಂಗಳೂರಿನ ಸೆಂಟ್ರಲ್ ಕಾಲೇಜ್ ಗೆ ವರ್ಗವಾದರು.ಅನಂತರ ಅವರು 1942ರ ವರೆಗೆ ಈ ಕಾಲೇಜಿನ ಏಳಿಗೆಗಾಗಿ ದುಡಿದು 1944ರಲ್ಲಿ 'ಧಾರವಾಡದ ಕೆ.ಇ.ಬೋರ್ಡ್'ನ ಮುಖ್ಯಸ್ಥರಾಗಿ ನೇಮಕಗೊಂಡು ಅವರ 'ಆರ್ಟ್ಸ್ ಕಾಲೇಜ್' ಗೆ 'ಪ್ರಾಂಶುಪಾಲಕ'ರಾಗಿ ಕೊನೆಯವರೆಗೆ ಅಲ್ಲಿಯೇ ಕೆಲಸ ಮಾಡಿದರು.

> 'ಬಿ.ಎಂ.ಶ್ರೀಕಂಠಯ್ಯನವರು' ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಅವಿಶ್ರಾಂತವಾಗಿ ದುಡಿದರು.

ಹಾಗೂ ಅವರ ಪ್ರೀತಿಯ ವಿದ್ಯಾರ್ಥಿಗಳಾದ 'ಮಾಸ್ತಿ', 'ಕುವೆಂಪು', 'ಎಸ್.ವಿ.ರಂಗಣ್ಣ', 'ತೀ.ನಂ.ಶ್ರೀಕಂಠಯ್ಯ', 'ಜಿ.ಪಿ.ರಾಜರತ್ನಂ', 'ಡಿ.ಎಲ್. 'ನರಸಿಂಹಚಾರ್' ಮುಂತಾದವರಿಗೆ ಕನ್ನಡದಲ್ಲಿ ಸಾಹಿತ್ಯ ರಚನೆ ಮಾಡಲು ಪ್ರೋತ್ಸಾಹಿದರು. ಅವರು ಕನ್ನಡದಲ್ಲಿ ಕೆಲವು ಉತ್ತಮ ನಾಟಕಗಳನ್ನು ಬರೆದರು.

> ಗದಾಯುದ್ಧ,

> ಅಶ್ವತ್ಥಾಮನ್

> ಪಾರಸಿಕರು

> ಪ್ರೊ. ಬಿ.ಎಂ.ಶ್ರೀ.ರವರು', 'ಹೊಂಗನಸು', 'ಇಂಗ್ಲಿಷ್ ಗೀತೆಗಳು' ಎಂಬ ಕವನ ಸಂಕಲನಗಳನ್ನು ರಚಿಸಿದ್ದಾರೆ. ಅವರು ನ್ಯೂಮನ್ ಕವಿ ಬರೆದ 'Lead Kindly Light' ಎಂಬ ಕವಿತೆಯನ್ನು ಕನ್ನಡದಲ್ಲಿ ಅನುವಾದ ಮಾಡಿದ `ಕರುಣಾಳು ಬಾ ಬೆಳಕೆ' ಎಂಬ ಕವನ ತುಂಬಾ ಜನಪ್ರಿಯವಾಯಿತು.


ಶ್ರೀ ಬಿ ಎಂ ಶ್ರೀಕಂಠಯ್ಯ ನವರಿಗೆ ಸಂದ ಪ್ರಶಸ್ತಿಗಳು


> 'ಬಿ.ಎಂ.ಶ್ರೀ'ಯವರಿಗೆ 1938ರಲ್ಲಿ ಅವರ ಅವಿಸ್ಮರಣೀಯ ಕೆಲಸಕ್ಕಾಗಿ ಮೈಸೂರಿನ ಮಹಾರಾಜರು 'ರಾಜ ಸೇವಾಸಕ್ತ' ಎಂಬ ಬಿರುದನ್ನು ನೀಡಿ ಗೌರವಿಸಿದರು.

> 1928ರಲ್ಲಿ 'ಗುಲಬರ್ಗಾ'ದಲ್ಲಿ ನಡೆದ '14ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ ಅದರ ಏಳಿಗೆಗಾಗಿ ಶ್ರಮಿಸಿದರು. ಹೀಗೆ ತಮ್ಮ ಜೀವಿತ ಕಾಲವನ್ನು

ಕನ್ನಡ ಸಾಹಿತ್ಯಕ್ಕಾಗಿ ಮೀಸಲಿಟ್ಟ ಬಿ. ಎಂ. ಶ್ರೀ ಅವರನ್ನು ಕನ್ನಡದ ಕಣ್ಮ' ಎಂದು ಕರೆಯಲಾಗುತ್ತದೆ.


ಬಿ. ಎಂ. ಶ್ರೀಕಂಠಯ್ಯ ರವರ ನಿಧನ

> ಜನವರಿ 5, 1946ರಲ್ಲಿ 'ಪ್ರೊ.ಬಿ.ಎಂ.ಶ್ರೀ' ರವರು, 'ಧಾರವಾಡದಲ್ಲಿ ನಿಧನರಾದರು.


No comments:

Post a Comment

Important Notes

Random Posts

Important Notes

Popular Posts

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Nobel Prize Complete Details and 2021 Nobel Prize Winners List for All Competitive Exams

Nobel Prize Complete Details and 2021 Nobel Prize Winners List ನೊಬೆಲ್ ಪಾರಿತೋಷಕ ಸಂಪೂರ್ಣ ವಿವರಣೆ ಹಾಗೂ 2021 ನೇ ಸಾಲಿನ ನೊಬೆಲ್ ಪಾರಿತೋಷಕ ವಿಜೇತರ ಪಟ್ಟಿ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿ ಐಎಎಸ್, ಕೆಪಿಎಸ್ಸಿಯ ಕೆಎಎಸ್, ಎಫ್ಡಿಎ ಎಸ್ಡಿಎ, ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಹಾಗೂ ಪಿಡಿಒ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಪಟ್ಟ 2021 ರ ಸಾಲಿನ ಪ್ರಮುಖ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ. 2021 ನೇ ಸಾಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ವಿಜೇತರ ಪಟ್ಟಿ 2021 ನೇ ಸಾಲಿನಲ್ಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ಅವುಗಳ ವಿಜೇತರ ಪಟ್ಟಿಯು ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಹಳ ಉಪಯುಕ್ತವಾಗಿದೆ. ಅದರಲ್ಲೂ ವಿಶೇಷವಾಗಿ  FDA/SAD/PSI//PDO/PC  ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ನೇಮಕಾತಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಪ್ರಶಸ್ತಿಗಳ ಕುರಿತು ಪ್ರಶ್ನೆಗಳು ಇದ್ದೇ ಇರುತ್ತವೆ ಆದ್ದರಿಂದ ಇದನ್ನು ಗಮನದಲ್ಲಿಟ್ಟು ಅಧ್ಯಯನ ಮಾಡಿ...!! Here is a list of the major awards for the upcoming Competitive Examination - UPSC IAS, KPSC's KAS, FDA SDA, Group-C recruitment and PDO, PSI, Police Constable, and Graduate Primary School Teachers' E...