Breaking

Sunday, 9 January 2022

Important Achievements/Contributions Events of Governor Generals and Viceroys of British India

ಬ್ರಿಟಿಷ್ ಭಾರತದಲ್ಲಿದ್ದ ಗವರ್ನರ್ ಜನರಲ್ ಹಾಗೂ ವೈಸ್ರಾಯ್ ಅವಧಿಯ ಪ್ರಮುಖ ಸಾಧನೆಗಳು ಕೊಡುಗೆಗಳು/ಘಟನೆಗಳು
(Important Achievements/Contributions Events of Governor Generals and Viceroys of British India)

Important Achievements/Contributions Events of Governor Generals and Viceroys of British India ಬ್ರಿಟಿಷ್ ಭಾರತದಲ್ಲಿದ್ದ ಗವರ್ನರ್ ಜನರಲ್ ಹಾಗೂ ವೈಸ್ರಾಯ್ ಅವಧಿಯ ಪ್ರಮುಖ ಸಾಧನೆಗಳು ಕೊಡುಗೆಗಳು/ಘಟನೆಗಳು



1) ವಾರನ್ ಹೇಸ್ಟಿಂಗ್ಸ್ (1774 - 1785) 

  • ಮೊದಲ ಬಂಗಾಳದ ಗವರ್ನರ್ ಜನರಲ್.
  • ಈತನ ಅಧಿಕಾರಾವಧಿಯಲ್ಲಿ ರೆಗ್ಯುಲೇಟಿಂಗ್ 1773 ಕಾಯಿದೆಯನ್ನು ಪರಿಚಯಿಸಲಾಯಿತು. ಇದು ಬಂಗಾಳದಲ್ಲಿದ್ದ ದ್ವಿಮುಖ ಸರ್ಕಾರದ ಅಂತ್ಯಗೊಳಿಸಿತು,
  • ಈತನನ್ನು ಆಡಳಿತದ ಕೆಟ್ಟ ನಿರ್ವಹಣೆ ಮತ್ತು ವೈಯಕ್ತಿಕ ಭ್ರಷ್ಟಾಚಾರದ ಕಾರಣಗಳಿಂದ ವಜಾಗೊಳಿಸಲಾಯಿತು. ಆದರೆ ಅಂತಿಮವಾಗಿ ನಿರ್ದೋಷಿಯೆಂದು ತೀರ್ಮಾನಿಸಲಾಯಿತು,
  • ಕಂದಾಯ ಮಂಡಳಿ ಮತ್ತು ವ್ಯಾಪಾರ ಮಂಡಳಿಯ ರಚನೆ.
  • ಜಿಲ್ಲಾಧಿಕಾರಿ ಹುದ್ದೆ ಸೃಷ್ಟಿ.

2) ಲಾರ್ಡ್ ಕಾರ್ನ್ ವಾಲಿಸ್ (1786 -1793).

  • ಬಂಗಾಳದಲ್ಲಿ ಖಾಯಂ ಜಮೀನ್ದಾರಿ ಪದ್ಧತಿ ಜಾರಿಗೆ (1793)
  • ಪೊಲೀಸ್ ಠಾಣೆಗಳ ಸ್ಥಾಪನೆ, ಪೊಲೀಸ್ ಸುಧಾರಣೆಗಳು ಜಾರಿಯಾದವು.
  • ಮೈಸೂರು ರಾಜ ಟಿಪ್ಪು ಸುಲ್ತಾನನನ್ನು ಸೋಲಿಸಲು ಮೂರನೇ ಆಂಗ್ಲೋ-ಮೈಸೂರು ಯುದ್ಧದಲ್ಲಿ ಬ್ರಿಟಿಷ್ ಪಡೆಗಳ ಭಾಗಿ.

Also Read: 2021 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂಪೂರ್ಣ ಮಾಹಿತಿ  

3) ಲಾರ್ಡ್ ವೆಲ್ಲೆಸ್ಲಿ (1798 - 1805)


  • ಭಾರತೀಯ ರಾಜರನ್ನು ನಿಯಂತ್ರಿಸಲು ಸಹಾಯಕ ಸೈನ್ಯ ಪದ್ಧತಿ (policy of Subsidiary Alliance) ಯನ್ನು ಪರಿಚಯಿಸಿದ.
  • ಹೈದರಾಬಾದ್ ಪ್ರಾಂತ್ಯವು ಈ ಸಹಾಯಕ ಸೈನ್ಯ ಪದ್ಧತಿಗೆ ಒಳಗಾದ ಮೊದಲ ದೇಶೀಯ ಸಂಸ್ಥಾನ.

4) ಲಾರ್ಡ್ ಮಿಂಟೋ I(1807 - 1813)


  • ಮಹಾರಾಜ ರಂಜಿತ್ ಸಿಂಗ್ ನೊಂದಿಗೆ ಅಮೃತಸರ ಒಡಂಬಡಿಕೆ,


5) ಮಾರ್ಕ್ವೆಸ್ಟ್ ಆಫ್ ಹೇಸ್ಟಿಂಗ್ (1813-1823)


  • ಉನ್ನತ ಹುದ್ದೆಗಳಿಗೆ ಭಾರತೀಯರನ್ನು ನೇಮಿಸಿದ ಮೊದಲಿಗ.
  • ಟೆನೆನ್ಸಿ ಕಾಯಿದೆ (1828)


6) ಲಾರ್ಡ್ ವಿಲಿಯಂ ಬೆಂಟಿಂಕ್ (1828 - 1835)


  • ಭಾರತದ ಮೊದಲ ಗವರ್ನರ್ ಜನರಲ್ ನಾಗಿ ನೇಮಕ. (ಈ ಮೊದಲು ಬಂಗಾಳದ ಗವರ್ನರ್ ಜನರಲ್ ಎಂಬ ಹುದ್ದೆ ಇತ್ತು).
  • ಸತಿ ಪದ್ದತಿಯ ನಿಷೇಧ.
  • ಭಾರತೀಯರನ್ನು ಮತ್ತೆ ಅಧೀನ ನ್ಯಾಯಾಧೀಶರಾಗಿ ನೇಮಕ ಜಾರಿ,
  • ಇಂಗ್ಲೀಷ್ ಉನ್ನತ ಶಿಕ್ಷಣದ ಭಾಷೆಯಾಯಿತು.
  • ಮಧ್ಯ ಭಾರತದಲ್ಲಿ ಧಗ್ಗರನ್ನು ನಿಗ್ರಹಿಸಲಾಯಿತು.
  • 1835ರಲ್ಲಿ ಕಲ್ಕತ್ತಾದಲ್ಲಿ ವೈದ್ಯಕೀಯ ಕಾಲೇಜು ಆರಂಭ.

7) ಸರ್ ಚಾರ್ಲ್ಸ್ ಮೆಟಾಕೆಫ್ (1835 - 1836)


  • ಮೊದಲ ಬಾರಿಗೆ ದೇಶೀಯ ಪತ್ರಿಕೆಗಳಿಗೆ ಸ್ವಾತಂತ್ರ್ಯ. ಎಲ್ಲಾ ನಿರ್ಬಂಧಗಳನ್ನು ರದ್ದು.
  • ಭಾರತದ ವೃತ್ತ ಪತ್ರಗಳ ನಿರ್ಬಂಧ ವಿಮೋಚಕ


8) ಲಾರ್ಡ್ ಆಕ್ಲಂಡ್ (1836 - 1842)


  • ಮೊದಲ ಅಫಘಾನ್ ಯುದ್ಧ.

Also Read: ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಗಳ ಪಟ್ಟಿ 

9) ಲಾರ್ಡ್ ಡಾಲ್ ಹೌಸಿ (1848 - 1856)


  • ಬಾಂಬೆಯಿಂದ ಥಾಣೆಯವರೆಗೆ ಮೊದಲ ಭಾರತೀಯ ರೈಲ್ವೆ ಮಾರ್ಗ ನಿರ್ಮಾಣ. (1853)
  • ಕೋಲ್ಕತ್ತಾದಿಂದ ಆಗ್ರಾದವರೆಗೆ ಟೆಲಿಗ್ರಾಫ್ ತಂತಿಯ ನಿರ್ಮಾಣ. (1853).
  • 'ದತ್ತು ಮಕ್ಕಳಿಗೆ ಹಕ್ಕಿಲ್ಲ' ಪದ್ಧತಿ ಜಾರಿಗೆ, ಆ ಮೂಲಕ ಸತಾರ (1848), ಜೈಪುರ ಮತ್ತು ಸಂಬಲ್ ಪುರ್ (1849), ಉದಯ್ ಪುರ (1852), ಝಾನ್ಸಿ (1853) ಮತ್ತು ನಾಗುರ (1854) ರಾಜ್ಯಗಳನ್ನು ವಶಪಡಿಸಿಕೊಳ್ಳಲಾಯಿತು.
  • ಶಿಮ್ಲಾವನ್ನು ಬೇಸಿಗೆ ರಾಜಧಾನಿಯಾಗಿ ಮಾಡಿದ.
  • ಲೋಕೋಪಯೋಗಿ ಇಲಾಖೆ ರಚನೆ.
  • ವಿಧವಾ ಮರುವಿವಾಹ ಕಾಯಿದೆ, (1856)ಯ ಅನುಷ್ಠಾನದೊಂದಿಗೆ ವಿಧವೆಯರ ಮರು ಮದುವೆ ಕಾನೂನು ಬದ್ಧಗೊಳಿಸಲಾಯಿತು.
  • ಭಾರತೀಯ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆ ಪ್ರಾರಂಭ (1853).

10) ಲಾರ್ಡ್ ಕ್ಯಾನಿಂಗ್ (1856 - 1862)


  • 1857ರ (ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ) ಸಿಪಾಯಿ ದಂಗೆಯ ಸಮಯದಲ್ಲಿದ್ದ ಗವರ್ನರ್ ಜನರಲ್, ದಂಗೆಯ ನಂತರ ಭಾರತದ ಮೊದಲ ವೈಸ್ರಾಯ್ ನಾಗಿ ನೇಮಕ.
  • 'ದತ್ತು ಮಕ್ಕಳಿಗೆ ಹಕ್ಕಿಲ್ಲ' ಪದ್ಧತಿ ರದ್ದು.
  • 1861ರಲ್ಲಿ ಭಾರತೀಯ ಕೌನ್ಸಿಲ್ ಕಾಯಿದೆ ಜಾರಿಗೆ,
  • 1854 ರ 'ವುಡ್ಸ್ ಡಿಸ್ ಪ್ಯಾಚ್' ನ ಪ್ರಕಾರ ಕಲ್ಕತ್ತಾ, ಬಾಂಬೆ ಮತ್ತು ಮದ್ರಾಸ್ ವಿಶ್ವವಿದ್ಯಾಲಗಳ ಆರಂಭ.
  • 1858ರ ವಿಕ್ಟೋರಿಯಾ ಮಹಾರಾಣಿಯ ಮಹಾಸನ್ನದು “ಭಾರತದ ಮ್ಯಾಗ್ನಾಕಾರ್ಟಾ” ಪ್ರಕಟ.
  • 1837ರಲ್ಲಿ ಮೆಕಾಲೆಯು ತಯಾರಿಸಿದ್ದ 'ಭಾರತೀಯ ದಂಡ ಸಂಹಿತೆಯ ಜಾರಿ.(1860)
  • ಸಿವಿಲ್ ಪ್ರೊಸೀಜರ್ ಕೋಡ್ಸ್ ಜಾರಿ (1861).

Also Read: 03 ಜನೆವರಿ : ಬಿ. ಎಂ. ಶ್ರೀಕಂಠಯ್ಯನವರ ಜನ್ಮದಿನಾಚರಣೆ

11) ಲಾರ್ಡ್ ಲಾರೆನ್ಸ್ (1864 - 1869)


  • ಎರಡನೇ ಸಿಖ್ ಯುದ್ಧದ ನಂತರ ಇತನು ಪಂಜಾಬ್ ಆಡಳಿತ ಇಲಾಖೆಯ ಸದಸ್ಯನಾದನು. ಮತ್ತು ಪಂಜಾಬಿನಲ್ಲಿ ಹಲವಾರು ಜವಾಬ್ದಾರಿಯುತ ಸುಧಾರಣೆಗಳನ್ನು ಜಾರಿಯಲ್ಲಿ ತಂದು "ಪಂಜಾಬ್ ದ ಸಂರಕ್ಷಕ" ನೆಂದು ಖ್ಯಾತನಾದನು.
  • 1865 ರಲ್ಲಿ ಕಲ್ಕತ್ತಾ, ಬಾಂಬೆ ಮತ್ತು ಮದ್ರಾಸ್ ಗಳಲ್ಲಿ ಹೈಕೋರ್ಟ್‌ಗಳನ್ನು ಸ್ಥಾಪಿಸಲಾಯಿತು.

12) ಲಾರ್ಡ್ ಮಾಯೊ (1869 - 1872)


  • ಭಾರತದಲ್ಲಿ ಪ್ರಥಮ ಜನಗಣತಿ (1871)
  • 1872 ರಲ್ಲಿ ಅಂಡಮಾನ್ ದ್ವೀಪಗಳ ಭೇಟಿ ಸಂದರ್ಭದಲ್ಲಿ (ಕೈದಿ ಶೇರ್ ಅಲಿಯಿಂದ) ಭಾರತದಲ್ಲಿ ಕೊಲ್ಲಲ್ಪಟ್ಟ ಏಕ ಮಾತ್ರ ವೈಸರಾಯ್.
  • ಕೃಷಿ ಇಲಾಖೆಯ ಸ್ಥಾಪನೆ.


13) ಲಾರ್ಡ್ ಲಿಟ್ಟನ್ (1876- 1880)


  • 1877 ರಲ್ಲಿ ದೆಹಲಿ ದರ್ಬಾರ್ ಆಯೋಜಿಸಿ, ರಾಣಿ ವಿಕ್ಟೋರಿಯಾಗೆ ' ಕೈಸರ್-ಇ-ಹಿಂದ್' ಬಿರುದು ಪ್ರಧಾನ.
  • ಭಾರತದ ವೃತ್ತ ಪತ್ರಗಳ ಮೇಲೆ ನಿರ್ಬಂಧ ವಿಧಿಸುವ 'ದೇಶೀಯ ಪತ್ರಿಕಾ ಕಾಯಿದೆ ಜಾರಿಗೆ (1878)
  • ಶಸ್ತ್ರಾಸ್ತ್ರ ಕಾಯಿದೆ - (1878),
  • ಸರ್.ಸಯ್ಯದ್ ಅಹ್ಮದ್ ಖಾನರಿಂದ ಅಲಿಘಡದಲ್ಲಿ ಮಹಮ್ಮದನ್ ಆಂಗ್ಲೋ ಓರಿಯಂಟಲ್ ಕಾಲೇಜು ಸ್ಥಾಪನೆ. (1877)
  • ನಾಗರಿಕ ಸೇವಾ ಪರೀಕ್ಷೆ ಪ್ರವೇಶ ವಯಸ್ಸನ್ನು 21 ರಿಂದ 19ಕ್ಕೆ ಇಳಿಸಲಾಯಿತು.

Also Read:  03 ಜನೆವರಿ : ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನ

14) ಲಾರ್ಡ್ ರಿಪ್ಪನ್ (1880 - 1884)


  • ಭಾರತದ ವೃತ್ತಪತ್ರಗಳ ಮೇಲೆ ನಿರ್ಬಂಧ ವಿಧಿಸುವ 'ದೇಶೀಯ ಪತ್ರಿಕಾ ಕಾಯಿದೆ' ರದ್ದು. (1882)
  • ನಾಗರಿಕ ಸೇವಾ ಪರೀಕ್ಷೆ ಪ್ರವೇಶ ವಯಸ್ಸನ್ನು ಪುನ: 19 ರಿಂದ 21ಕ್ಕೆ ಏರಿಸಲಾಯಿತು.
  • ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಲು ಮೊದಲ ಫ್ಯಾಕ್ಟರಿ ಕಾಯಿದೆ ಅಂಗೀಕಾರ (1881)
  • 'ಭಾರತೀಯ ಸ್ಥಳೀಯ ಸರ್ಕಾರಗಳ ಪಿತಾಮಹ' - ದೇಶದಲ್ಲಿ ನಗರ ಸಭೆಗಳು, ಜಿಲ್ಲಾ ಮತ್ತು ಸ್ಥಳೀಯ ಮಂಡಳಿಗಳ ಸ್ಥಾಪನೆ. (1882)
  • ಆಲ್ಬರ್ಟ್ ಬಿಲ್ ಕಾಯಿದೆ ಜಾರಿಗೆ (1883)

15) ಲಾರ್ಡ್ ಡಫೆರಿನ್ನ (1884 - 1894)


  • ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ರಚಿಸಲಾಯಿತು. (1885)


16) ಲಾರ್ಡ್ ಲಾನ್ಸ್ ಡೌನ್ (1888 - 1894)


  • ಭಾರತೀಯ ಕೌನ್ಸಿಲ್ ಕಾಯಿದೆ (1892)
  • ಬ್ರಿಟಿಷ್ ಭಾರತ ಮತ್ತು ಅಫ್ಘಾನಿಸ್ಥಾನ ನಡುವೆ ಗಡಿರೇಖೆ ಗುರುತಿಸಲು ಡುರಾಂಡ್ ಅಯೋಗದ ನೇಮಕ.


16) ಲಾರ್ಡ್ ಕರ್ಜನ್ (1899 - 1905)

  • ಬಂಗಾಳದ ವಿಭಜನೆ (1905)
  • ಸ್ವದೇಶಿ ಚಳವಳಿಯ ಆರಂಭ.
  • ಕೃಷಿ ಬ್ಯಾಂಕುಗಳ ಸ್ಥಾಪನೆ. ಬಂಗಾಳದ ಪೂಸಾದಲ್ಲಿ ಕೃಷಿ ಸಂಶೋಧನಾ ಸಂಸ್ಥೆ ಸ್ಥಾಪನೆ (1904)
  • ಪುರಾತನ ಸ್ಮಾರಕಗಳ ಸಂರಕ್ಷಣಾ ಕಾಯಿದೆ ಜಾರಿ, ಪುರಾತತ್ವ ಇಲಾಖೆ ರಚನೆ (1991)
  • ಸರ್. ಥಾಮಸ್ ರಾಲೆ. ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯ ಆಯೋಗ ನೇಮಕ, 'ಭಾರತೀಯ ವಿಶ್ವವಿದ್ಯಾಲಯಗಳ ಕಾಯಿದೆ ಜಾರಿ. (1904)
  • ಪೊಲೀಸ್ ಆಯೋಗ ರಚನೆ.
  • ಕ್ರಿಮಿನಲ್ ತನಿಖಾ ಇಲಾಖೆ ರಚನೆ.

Also Read: ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಗಳ ಪಟ್ಟಿ 

17) ಲಾರ್ಡ್ ಮಿಂಟೊ (1905-1910)


  • ಭಾರತೀಯ ಮಂಡಳಿ ಕಾಯಿದೆ -1909 ಅಥವಾ ಮಾರ್ಲ-ಮಿಂಟೊ ಸುಧಾರಣೆಗಳನ್ನು ಅಂಗೀಕರಿಸಿತು.
  • ಮುಸ್ಲಿಂರಿಗೆ ಪ್ರತ್ಯೇಕ ಮತಕ್ಷೇತ್ರ ಪ್ರಾತಿನಿಧ್ಯ.


18) ಲಾರ್ಡ್ ಹಾರ್ಡಿಂಗ್ (1910 - 1916)


  • ಇಂಗ್ಲೆಂಡ್ ನ ದೊರೆ Vನೇ ಜಾರ್ಜ್ನ ಪಟ್ಟಾಭಿಷೇಕ - ದೆಹಲಿ ದರ್ಬಾರ್ (1911)
  • ಭಾರತದ ರಾಜಧಾನಿ ಕಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾಯಿತು (1911).
  • ಅನ್ನಿ ಬೆಸೆಂಟ್ ರಿಂದ ಹೋಮ್ ರೂಲ್ ಚಳುವಳಿ ಆರಂಭಿಸಲಾಯಿತು. (1921).
  • ಮಹಾತ್ಮಗಾಂಧಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಆಗಮನ (1915)


19) ಲಾರ್ಡ್ ಚೆಲ್ಮ್ಸ್ ಫೋರ್ಡ್ (1916 - 1921)


  • ಭಾರತ ಸರ್ಕಾರದ ಕಾಯಿದೆ -1919 (ಮೊಂಟಾಗು ಚೆಲ್ಮ್ಸ್ ಫೋರ್ಡ್ ಸುಧಾರಣೆಗಳು)
  • ರೌಲಟ್ ಕಾಯಿದೆ -1919 ಜಾರಿಗೆ.
  • ಜಲಿಯನ್ ವಾಲಾ ಬಾಗ್ ದುರಂತ. (ಏಪ್ರಿಲ್ 13, 1919)
  • ಖಿಲಾಪತ್ ಚಳುವಳಿ.
  • ಅಸಹಕಾರ ಚಳುವಳಿ,

20) ಲಾರ್ಡ್ ರೆಡಿಂಗ್ (1921 - 1926)


  • ರೌಲಟ್ ಆಕ್ಸ್ ಅನ್ನು ರದ್ದುಗೊಳಿಸಲಾಯಿತು.
  • ಸ್ವರಾಜ್ ಪಕ್ಷ ರಚಿಸಲಾಯಿತು,
  • ಚೌರಿಚೌರ ಘಟನೆ.


21) ಲಾರ್ಡ್ ಇರ್ವಿನ್ (1926 - 1931)


  • ಸೈಮನ್ ಆಯೋಗ ಭಾರತಕ್ಕೆ ಭೇಟಿ - (1928)
  • ದಂಡಿ ಸತ್ಯಾಗ್ರಹ ಪ್ರಾರಂಭಿಸಲಾಯಿತು ಭಾರತಕ್ಕೆ ಭೇಟಿ ನೀಡಿದರು.
  • ನಾಗರಿಕ ಅಸಹಕಾರ ಚಳುವಳಿಯನ್ನು 1930 ರಲ್ಲಿ ಆರಂಭಿಸಲಾಯಿತು,
  • ಗಾಂಧಿ - ಇರ್ವಿನ್ ಒಪ್ಪಂದಕ್ಕೆ ಸಹಿ
  • ಮೊದಲ ದುಂಡು ಮೇಜಿನ ಸಭೆ.


22) ಲಾರ್ಡ್ ವಿಲ್ಲಿಂಗ್ಟನ್ (1931 - 1936)


  • 1931ರಲ್ಲಿ ಎರಡನೇ ಮತ್ತು ಮೂರನೆಯ ದುಂಡು ಮೇಜಿನ ಸಭೆ
  • ಬ್ರಿಟಿಷ್ ಪ್ರಧಾನಮಂತ್ರಿ ರಾಮೈ ಮ್ಯಾಕ್ ಡೊನಾಲ್ಡ್ ರಿಂದ ಕಮ್ಯುನಲ್ ಅವಾರ್ಡ್ ಪ್ರಾರಂಭ,
  • ಪೂನಾ ಒಪ್ಪಂದದ ಸಹಿ.
  • 1935ರ ಭಾರತ ಸರಕಾರದ ಆಕ್ಸ್ ನ್ನು ಪ್ರಾಂತ್ಯಗಳಲ್ಲಿ ಜಾರಿಗೆ,


No comments:

Post a Comment

Important Notes

Random Posts

Important Notes

Popular Posts