Breaking

Sunday, 9 January 2022

Important Achievements/Contributions Events of Governor Generals and Viceroys of British India

ಬ್ರಿಟಿಷ್ ಭಾರತದಲ್ಲಿದ್ದ ಗವರ್ನರ್ ಜನರಲ್ ಹಾಗೂ ವೈಸ್ರಾಯ್ ಅವಧಿಯ ಪ್ರಮುಖ ಸಾಧನೆಗಳು ಕೊಡುಗೆಗಳು/ಘಟನೆಗಳು
(Important Achievements/Contributions Events of Governor Generals and Viceroys of British India)

Important Achievements/Contributions Events of Governor Generals and Viceroys of British India ಬ್ರಿಟಿಷ್ ಭಾರತದಲ್ಲಿದ್ದ ಗವರ್ನರ್ ಜನರಲ್ ಹಾಗೂ ವೈಸ್ರಾಯ್ ಅವಧಿಯ ಪ್ರಮುಖ ಸಾಧನೆಗಳು ಕೊಡುಗೆಗಳು/ಘಟನೆಗಳು



1) ವಾರನ್ ಹೇಸ್ಟಿಂಗ್ಸ್ (1774 - 1785) 

  • ಮೊದಲ ಬಂಗಾಳದ ಗವರ್ನರ್ ಜನರಲ್.
  • ಈತನ ಅಧಿಕಾರಾವಧಿಯಲ್ಲಿ ರೆಗ್ಯುಲೇಟಿಂಗ್ 1773 ಕಾಯಿದೆಯನ್ನು ಪರಿಚಯಿಸಲಾಯಿತು. ಇದು ಬಂಗಾಳದಲ್ಲಿದ್ದ ದ್ವಿಮುಖ ಸರ್ಕಾರದ ಅಂತ್ಯಗೊಳಿಸಿತು,
  • ಈತನನ್ನು ಆಡಳಿತದ ಕೆಟ್ಟ ನಿರ್ವಹಣೆ ಮತ್ತು ವೈಯಕ್ತಿಕ ಭ್ರಷ್ಟಾಚಾರದ ಕಾರಣಗಳಿಂದ ವಜಾಗೊಳಿಸಲಾಯಿತು. ಆದರೆ ಅಂತಿಮವಾಗಿ ನಿರ್ದೋಷಿಯೆಂದು ತೀರ್ಮಾನಿಸಲಾಯಿತು,
  • ಕಂದಾಯ ಮಂಡಳಿ ಮತ್ತು ವ್ಯಾಪಾರ ಮಂಡಳಿಯ ರಚನೆ.
  • ಜಿಲ್ಲಾಧಿಕಾರಿ ಹುದ್ದೆ ಸೃಷ್ಟಿ.

2) ಲಾರ್ಡ್ ಕಾರ್ನ್ ವಾಲಿಸ್ (1786 -1793).

  • ಬಂಗಾಳದಲ್ಲಿ ಖಾಯಂ ಜಮೀನ್ದಾರಿ ಪದ್ಧತಿ ಜಾರಿಗೆ (1793)
  • ಪೊಲೀಸ್ ಠಾಣೆಗಳ ಸ್ಥಾಪನೆ, ಪೊಲೀಸ್ ಸುಧಾರಣೆಗಳು ಜಾರಿಯಾದವು.
  • ಮೈಸೂರು ರಾಜ ಟಿಪ್ಪು ಸುಲ್ತಾನನನ್ನು ಸೋಲಿಸಲು ಮೂರನೇ ಆಂಗ್ಲೋ-ಮೈಸೂರು ಯುದ್ಧದಲ್ಲಿ ಬ್ರಿಟಿಷ್ ಪಡೆಗಳ ಭಾಗಿ.

Also Read: 2021 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂಪೂರ್ಣ ಮಾಹಿತಿ  

3) ಲಾರ್ಡ್ ವೆಲ್ಲೆಸ್ಲಿ (1798 - 1805)


  • ಭಾರತೀಯ ರಾಜರನ್ನು ನಿಯಂತ್ರಿಸಲು ಸಹಾಯಕ ಸೈನ್ಯ ಪದ್ಧತಿ (policy of Subsidiary Alliance) ಯನ್ನು ಪರಿಚಯಿಸಿದ.
  • ಹೈದರಾಬಾದ್ ಪ್ರಾಂತ್ಯವು ಈ ಸಹಾಯಕ ಸೈನ್ಯ ಪದ್ಧತಿಗೆ ಒಳಗಾದ ಮೊದಲ ದೇಶೀಯ ಸಂಸ್ಥಾನ.

4) ಲಾರ್ಡ್ ಮಿಂಟೋ I(1807 - 1813)


  • ಮಹಾರಾಜ ರಂಜಿತ್ ಸಿಂಗ್ ನೊಂದಿಗೆ ಅಮೃತಸರ ಒಡಂಬಡಿಕೆ,


5) ಮಾರ್ಕ್ವೆಸ್ಟ್ ಆಫ್ ಹೇಸ್ಟಿಂಗ್ (1813-1823)


  • ಉನ್ನತ ಹುದ್ದೆಗಳಿಗೆ ಭಾರತೀಯರನ್ನು ನೇಮಿಸಿದ ಮೊದಲಿಗ.
  • ಟೆನೆನ್ಸಿ ಕಾಯಿದೆ (1828)


6) ಲಾರ್ಡ್ ವಿಲಿಯಂ ಬೆಂಟಿಂಕ್ (1828 - 1835)


  • ಭಾರತದ ಮೊದಲ ಗವರ್ನರ್ ಜನರಲ್ ನಾಗಿ ನೇಮಕ. (ಈ ಮೊದಲು ಬಂಗಾಳದ ಗವರ್ನರ್ ಜನರಲ್ ಎಂಬ ಹುದ್ದೆ ಇತ್ತು).
  • ಸತಿ ಪದ್ದತಿಯ ನಿಷೇಧ.
  • ಭಾರತೀಯರನ್ನು ಮತ್ತೆ ಅಧೀನ ನ್ಯಾಯಾಧೀಶರಾಗಿ ನೇಮಕ ಜಾರಿ,
  • ಇಂಗ್ಲೀಷ್ ಉನ್ನತ ಶಿಕ್ಷಣದ ಭಾಷೆಯಾಯಿತು.
  • ಮಧ್ಯ ಭಾರತದಲ್ಲಿ ಧಗ್ಗರನ್ನು ನಿಗ್ರಹಿಸಲಾಯಿತು.
  • 1835ರಲ್ಲಿ ಕಲ್ಕತ್ತಾದಲ್ಲಿ ವೈದ್ಯಕೀಯ ಕಾಲೇಜು ಆರಂಭ.

7) ಸರ್ ಚಾರ್ಲ್ಸ್ ಮೆಟಾಕೆಫ್ (1835 - 1836)


  • ಮೊದಲ ಬಾರಿಗೆ ದೇಶೀಯ ಪತ್ರಿಕೆಗಳಿಗೆ ಸ್ವಾತಂತ್ರ್ಯ. ಎಲ್ಲಾ ನಿರ್ಬಂಧಗಳನ್ನು ರದ್ದು.
  • ಭಾರತದ ವೃತ್ತ ಪತ್ರಗಳ ನಿರ್ಬಂಧ ವಿಮೋಚಕ


8) ಲಾರ್ಡ್ ಆಕ್ಲಂಡ್ (1836 - 1842)


  • ಮೊದಲ ಅಫಘಾನ್ ಯುದ್ಧ.

Also Read: ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಗಳ ಪಟ್ಟಿ 

9) ಲಾರ್ಡ್ ಡಾಲ್ ಹೌಸಿ (1848 - 1856)


  • ಬಾಂಬೆಯಿಂದ ಥಾಣೆಯವರೆಗೆ ಮೊದಲ ಭಾರತೀಯ ರೈಲ್ವೆ ಮಾರ್ಗ ನಿರ್ಮಾಣ. (1853)
  • ಕೋಲ್ಕತ್ತಾದಿಂದ ಆಗ್ರಾದವರೆಗೆ ಟೆಲಿಗ್ರಾಫ್ ತಂತಿಯ ನಿರ್ಮಾಣ. (1853).
  • 'ದತ್ತು ಮಕ್ಕಳಿಗೆ ಹಕ್ಕಿಲ್ಲ' ಪದ್ಧತಿ ಜಾರಿಗೆ, ಆ ಮೂಲಕ ಸತಾರ (1848), ಜೈಪುರ ಮತ್ತು ಸಂಬಲ್ ಪುರ್ (1849), ಉದಯ್ ಪುರ (1852), ಝಾನ್ಸಿ (1853) ಮತ್ತು ನಾಗುರ (1854) ರಾಜ್ಯಗಳನ್ನು ವಶಪಡಿಸಿಕೊಳ್ಳಲಾಯಿತು.
  • ಶಿಮ್ಲಾವನ್ನು ಬೇಸಿಗೆ ರಾಜಧಾನಿಯಾಗಿ ಮಾಡಿದ.
  • ಲೋಕೋಪಯೋಗಿ ಇಲಾಖೆ ರಚನೆ.
  • ವಿಧವಾ ಮರುವಿವಾಹ ಕಾಯಿದೆ, (1856)ಯ ಅನುಷ್ಠಾನದೊಂದಿಗೆ ವಿಧವೆಯರ ಮರು ಮದುವೆ ಕಾನೂನು ಬದ್ಧಗೊಳಿಸಲಾಯಿತು.
  • ಭಾರತೀಯ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆ ಪ್ರಾರಂಭ (1853).

10) ಲಾರ್ಡ್ ಕ್ಯಾನಿಂಗ್ (1856 - 1862)


  • 1857ರ (ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ) ಸಿಪಾಯಿ ದಂಗೆಯ ಸಮಯದಲ್ಲಿದ್ದ ಗವರ್ನರ್ ಜನರಲ್, ದಂಗೆಯ ನಂತರ ಭಾರತದ ಮೊದಲ ವೈಸ್ರಾಯ್ ನಾಗಿ ನೇಮಕ.
  • 'ದತ್ತು ಮಕ್ಕಳಿಗೆ ಹಕ್ಕಿಲ್ಲ' ಪದ್ಧತಿ ರದ್ದು.
  • 1861ರಲ್ಲಿ ಭಾರತೀಯ ಕೌನ್ಸಿಲ್ ಕಾಯಿದೆ ಜಾರಿಗೆ,
  • 1854 ರ 'ವುಡ್ಸ್ ಡಿಸ್ ಪ್ಯಾಚ್' ನ ಪ್ರಕಾರ ಕಲ್ಕತ್ತಾ, ಬಾಂಬೆ ಮತ್ತು ಮದ್ರಾಸ್ ವಿಶ್ವವಿದ್ಯಾಲಗಳ ಆರಂಭ.
  • 1858ರ ವಿಕ್ಟೋರಿಯಾ ಮಹಾರಾಣಿಯ ಮಹಾಸನ್ನದು “ಭಾರತದ ಮ್ಯಾಗ್ನಾಕಾರ್ಟಾ” ಪ್ರಕಟ.
  • 1837ರಲ್ಲಿ ಮೆಕಾಲೆಯು ತಯಾರಿಸಿದ್ದ 'ಭಾರತೀಯ ದಂಡ ಸಂಹಿತೆಯ ಜಾರಿ.(1860)
  • ಸಿವಿಲ್ ಪ್ರೊಸೀಜರ್ ಕೋಡ್ಸ್ ಜಾರಿ (1861).

Also Read: 03 ಜನೆವರಿ : ಬಿ. ಎಂ. ಶ್ರೀಕಂಠಯ್ಯನವರ ಜನ್ಮದಿನಾಚರಣೆ

11) ಲಾರ್ಡ್ ಲಾರೆನ್ಸ್ (1864 - 1869)


  • ಎರಡನೇ ಸಿಖ್ ಯುದ್ಧದ ನಂತರ ಇತನು ಪಂಜಾಬ್ ಆಡಳಿತ ಇಲಾಖೆಯ ಸದಸ್ಯನಾದನು. ಮತ್ತು ಪಂಜಾಬಿನಲ್ಲಿ ಹಲವಾರು ಜವಾಬ್ದಾರಿಯುತ ಸುಧಾರಣೆಗಳನ್ನು ಜಾರಿಯಲ್ಲಿ ತಂದು "ಪಂಜಾಬ್ ದ ಸಂರಕ್ಷಕ" ನೆಂದು ಖ್ಯಾತನಾದನು.
  • 1865 ರಲ್ಲಿ ಕಲ್ಕತ್ತಾ, ಬಾಂಬೆ ಮತ್ತು ಮದ್ರಾಸ್ ಗಳಲ್ಲಿ ಹೈಕೋರ್ಟ್‌ಗಳನ್ನು ಸ್ಥಾಪಿಸಲಾಯಿತು.

12) ಲಾರ್ಡ್ ಮಾಯೊ (1869 - 1872)


  • ಭಾರತದಲ್ಲಿ ಪ್ರಥಮ ಜನಗಣತಿ (1871)
  • 1872 ರಲ್ಲಿ ಅಂಡಮಾನ್ ದ್ವೀಪಗಳ ಭೇಟಿ ಸಂದರ್ಭದಲ್ಲಿ (ಕೈದಿ ಶೇರ್ ಅಲಿಯಿಂದ) ಭಾರತದಲ್ಲಿ ಕೊಲ್ಲಲ್ಪಟ್ಟ ಏಕ ಮಾತ್ರ ವೈಸರಾಯ್.
  • ಕೃಷಿ ಇಲಾಖೆಯ ಸ್ಥಾಪನೆ.


13) ಲಾರ್ಡ್ ಲಿಟ್ಟನ್ (1876- 1880)


  • 1877 ರಲ್ಲಿ ದೆಹಲಿ ದರ್ಬಾರ್ ಆಯೋಜಿಸಿ, ರಾಣಿ ವಿಕ್ಟೋರಿಯಾಗೆ ' ಕೈಸರ್-ಇ-ಹಿಂದ್' ಬಿರುದು ಪ್ರಧಾನ.
  • ಭಾರತದ ವೃತ್ತ ಪತ್ರಗಳ ಮೇಲೆ ನಿರ್ಬಂಧ ವಿಧಿಸುವ 'ದೇಶೀಯ ಪತ್ರಿಕಾ ಕಾಯಿದೆ ಜಾರಿಗೆ (1878)
  • ಶಸ್ತ್ರಾಸ್ತ್ರ ಕಾಯಿದೆ - (1878),
  • ಸರ್.ಸಯ್ಯದ್ ಅಹ್ಮದ್ ಖಾನರಿಂದ ಅಲಿಘಡದಲ್ಲಿ ಮಹಮ್ಮದನ್ ಆಂಗ್ಲೋ ಓರಿಯಂಟಲ್ ಕಾಲೇಜು ಸ್ಥಾಪನೆ. (1877)
  • ನಾಗರಿಕ ಸೇವಾ ಪರೀಕ್ಷೆ ಪ್ರವೇಶ ವಯಸ್ಸನ್ನು 21 ರಿಂದ 19ಕ್ಕೆ ಇಳಿಸಲಾಯಿತು.

Also Read:  03 ಜನೆವರಿ : ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನ

14) ಲಾರ್ಡ್ ರಿಪ್ಪನ್ (1880 - 1884)


  • ಭಾರತದ ವೃತ್ತಪತ್ರಗಳ ಮೇಲೆ ನಿರ್ಬಂಧ ವಿಧಿಸುವ 'ದೇಶೀಯ ಪತ್ರಿಕಾ ಕಾಯಿದೆ' ರದ್ದು. (1882)
  • ನಾಗರಿಕ ಸೇವಾ ಪರೀಕ್ಷೆ ಪ್ರವೇಶ ವಯಸ್ಸನ್ನು ಪುನ: 19 ರಿಂದ 21ಕ್ಕೆ ಏರಿಸಲಾಯಿತು.
  • ಬಾಲಕಾರ್ಮಿಕ ಪದ್ಧತಿಯನ್ನು ನಿಷೇಧಿಸಲು ಮೊದಲ ಫ್ಯಾಕ್ಟರಿ ಕಾಯಿದೆ ಅಂಗೀಕಾರ (1881)
  • 'ಭಾರತೀಯ ಸ್ಥಳೀಯ ಸರ್ಕಾರಗಳ ಪಿತಾಮಹ' - ದೇಶದಲ್ಲಿ ನಗರ ಸಭೆಗಳು, ಜಿಲ್ಲಾ ಮತ್ತು ಸ್ಥಳೀಯ ಮಂಡಳಿಗಳ ಸ್ಥಾಪನೆ. (1882)
  • ಆಲ್ಬರ್ಟ್ ಬಿಲ್ ಕಾಯಿದೆ ಜಾರಿಗೆ (1883)

15) ಲಾರ್ಡ್ ಡಫೆರಿನ್ನ (1884 - 1894)


  • ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ರಚಿಸಲಾಯಿತು. (1885)


16) ಲಾರ್ಡ್ ಲಾನ್ಸ್ ಡೌನ್ (1888 - 1894)


  • ಭಾರತೀಯ ಕೌನ್ಸಿಲ್ ಕಾಯಿದೆ (1892)
  • ಬ್ರಿಟಿಷ್ ಭಾರತ ಮತ್ತು ಅಫ್ಘಾನಿಸ್ಥಾನ ನಡುವೆ ಗಡಿರೇಖೆ ಗುರುತಿಸಲು ಡುರಾಂಡ್ ಅಯೋಗದ ನೇಮಕ.


16) ಲಾರ್ಡ್ ಕರ್ಜನ್ (1899 - 1905)

  • ಬಂಗಾಳದ ವಿಭಜನೆ (1905)
  • ಸ್ವದೇಶಿ ಚಳವಳಿಯ ಆರಂಭ.
  • ಕೃಷಿ ಬ್ಯಾಂಕುಗಳ ಸ್ಥಾಪನೆ. ಬಂಗಾಳದ ಪೂಸಾದಲ್ಲಿ ಕೃಷಿ ಸಂಶೋಧನಾ ಸಂಸ್ಥೆ ಸ್ಥಾಪನೆ (1904)
  • ಪುರಾತನ ಸ್ಮಾರಕಗಳ ಸಂರಕ್ಷಣಾ ಕಾಯಿದೆ ಜಾರಿ, ಪುರಾತತ್ವ ಇಲಾಖೆ ರಚನೆ (1991)
  • ಸರ್. ಥಾಮಸ್ ರಾಲೆ. ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯ ಆಯೋಗ ನೇಮಕ, 'ಭಾರತೀಯ ವಿಶ್ವವಿದ್ಯಾಲಯಗಳ ಕಾಯಿದೆ ಜಾರಿ. (1904)
  • ಪೊಲೀಸ್ ಆಯೋಗ ರಚನೆ.
  • ಕ್ರಿಮಿನಲ್ ತನಿಖಾ ಇಲಾಖೆ ರಚನೆ.

Also Read: ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಗಳ ಪಟ್ಟಿ 

17) ಲಾರ್ಡ್ ಮಿಂಟೊ (1905-1910)


  • ಭಾರತೀಯ ಮಂಡಳಿ ಕಾಯಿದೆ -1909 ಅಥವಾ ಮಾರ್ಲ-ಮಿಂಟೊ ಸುಧಾರಣೆಗಳನ್ನು ಅಂಗೀಕರಿಸಿತು.
  • ಮುಸ್ಲಿಂರಿಗೆ ಪ್ರತ್ಯೇಕ ಮತಕ್ಷೇತ್ರ ಪ್ರಾತಿನಿಧ್ಯ.


18) ಲಾರ್ಡ್ ಹಾರ್ಡಿಂಗ್ (1910 - 1916)


  • ಇಂಗ್ಲೆಂಡ್ ನ ದೊರೆ Vನೇ ಜಾರ್ಜ್ನ ಪಟ್ಟಾಭಿಷೇಕ - ದೆಹಲಿ ದರ್ಬಾರ್ (1911)
  • ಭಾರತದ ರಾಜಧಾನಿ ಕಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾಯಿತು (1911).
  • ಅನ್ನಿ ಬೆಸೆಂಟ್ ರಿಂದ ಹೋಮ್ ರೂಲ್ ಚಳುವಳಿ ಆರಂಭಿಸಲಾಯಿತು. (1921).
  • ಮಹಾತ್ಮಗಾಂಧಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಆಗಮನ (1915)


19) ಲಾರ್ಡ್ ಚೆಲ್ಮ್ಸ್ ಫೋರ್ಡ್ (1916 - 1921)


  • ಭಾರತ ಸರ್ಕಾರದ ಕಾಯಿದೆ -1919 (ಮೊಂಟಾಗು ಚೆಲ್ಮ್ಸ್ ಫೋರ್ಡ್ ಸುಧಾರಣೆಗಳು)
  • ರೌಲಟ್ ಕಾಯಿದೆ -1919 ಜಾರಿಗೆ.
  • ಜಲಿಯನ್ ವಾಲಾ ಬಾಗ್ ದುರಂತ. (ಏಪ್ರಿಲ್ 13, 1919)
  • ಖಿಲಾಪತ್ ಚಳುವಳಿ.
  • ಅಸಹಕಾರ ಚಳುವಳಿ,

20) ಲಾರ್ಡ್ ರೆಡಿಂಗ್ (1921 - 1926)


  • ರೌಲಟ್ ಆಕ್ಸ್ ಅನ್ನು ರದ್ದುಗೊಳಿಸಲಾಯಿತು.
  • ಸ್ವರಾಜ್ ಪಕ್ಷ ರಚಿಸಲಾಯಿತು,
  • ಚೌರಿಚೌರ ಘಟನೆ.


21) ಲಾರ್ಡ್ ಇರ್ವಿನ್ (1926 - 1931)


  • ಸೈಮನ್ ಆಯೋಗ ಭಾರತಕ್ಕೆ ಭೇಟಿ - (1928)
  • ದಂಡಿ ಸತ್ಯಾಗ್ರಹ ಪ್ರಾರಂಭಿಸಲಾಯಿತು ಭಾರತಕ್ಕೆ ಭೇಟಿ ನೀಡಿದರು.
  • ನಾಗರಿಕ ಅಸಹಕಾರ ಚಳುವಳಿಯನ್ನು 1930 ರಲ್ಲಿ ಆರಂಭಿಸಲಾಯಿತು,
  • ಗಾಂಧಿ - ಇರ್ವಿನ್ ಒಪ್ಪಂದಕ್ಕೆ ಸಹಿ
  • ಮೊದಲ ದುಂಡು ಮೇಜಿನ ಸಭೆ.


22) ಲಾರ್ಡ್ ವಿಲ್ಲಿಂಗ್ಟನ್ (1931 - 1936)


  • 1931ರಲ್ಲಿ ಎರಡನೇ ಮತ್ತು ಮೂರನೆಯ ದುಂಡು ಮೇಜಿನ ಸಭೆ
  • ಬ್ರಿಟಿಷ್ ಪ್ರಧಾನಮಂತ್ರಿ ರಾಮೈ ಮ್ಯಾಕ್ ಡೊನಾಲ್ಡ್ ರಿಂದ ಕಮ್ಯುನಲ್ ಅವಾರ್ಡ್ ಪ್ರಾರಂಭ,
  • ಪೂನಾ ಒಪ್ಪಂದದ ಸಹಿ.
  • 1935ರ ಭಾರತ ಸರಕಾರದ ಆಕ್ಸ್ ನ್ನು ಪ್ರಾಂತ್ಯಗಳಲ್ಲಿ ಜಾರಿಗೆ,


No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

10th ಭಾರತಕ್ಕೆ ಯುರೋಪಿಯನ್ನರ ಆಗಮನ ಸಮಾಜ ನೋಟ್ಸ್‌

10th ಭಾರತಕ್ಕೆ ಯುರೋಪಿಯನ್ನರ ಆಗಮನ ಸಮಾಜ ನೋಟ್ಸ್‌ ಭಾರತಕ್ಕೆ ಯುರೋಪಿಯನ್ನರ ಆಗಮನವು ದೇಶದ ಇತಿಹಾಸದಲ್ಲಿ ಮಹತ್ವದ ತಿರುವು ತಂದುಕೊಟ್ಟಿತು. 1498ರಲ್ಲಿ ವಾಸ್ಕೋ ಡ ಗಾಮಾ ನೇತೃತ್ವದ ಪೋರ್ಟುಗೀಸು ಸಮುದ್ರಯಾನದ ಮೂಲಕ ಪೋರ್ಟುಗೀಸರು ಮೊದಲ ಬಾರಿಗೆ ಭಾರತಕ್ಕೆ ಬಂದರು. ಅವರು ಕಲಿಕಟ್ ಬಂದರು ತಲುಪಿ, ಭಾರತ ಹಾಗೂ ಯುರೋಪಿನ ನಡುವಿನ ನೇರ ವ್ಯಾಪಾರದ ಮಾರ್ಗವನ್ನು ಸ್ಥಾಪಿಸಿದರು. ಇದರಿಂದ ಭಾರತವು ಜಾಗತಿಕ ವ್ಯಾಪಾರ ಜಾಲದಲ್ಲಿ ಪ್ರಮುಖ ಪಾತ್ರವನ್ನುವಹಿಸಲು ಪ್ರಾರಂಭಿಸಿತು. ಪೋರ್ಟುಗೀಸರ ನಂತರ, ಇಂಗ್ಲೀಷರು, ಡಚ್‌ಗಳು ಮತ್ತು ಫ್ರೆಂಚರು ಭಾರತದಲ್ಲಿ ತಮ್ಮ ವಾಣಿಜ್ಯ ಕೇಂದ್ರಗಳನ್ನು ಸ್ಥಾಪಿಸಲು ಮುಂದಾದರು. ಯುರೋಪಿಯನ್ನರ ಆಗಮನದಿಂದ ಭಾರತದಲ್ಲಿ ವ್ಯಾಪಾರ, ಸಂಸ್ಕೃತಿ, ಧರ್ಮ ಮತ್ತು ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಿದವು. ವೈವಿಧ್ಯಮಯ ವಸ್ತುಗಳು, ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಭಾರತಕ್ಕೆ ಪ್ರವೇಶಿಸಿವೆ. ಇಂಗ್ಲೀಷರು ಭಾರತವನ್ನು ತಮ್ಮ ಸಾಮ್ರಾಜ್ಯದ ಭಾಗವನ್ನಾಗಿ ಮಾಡಿಕೊಂಡ ನಂತರ, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ದೇಶದ ವಿವಿಧ ಭಾಗಗಳಲ್ಲಿ ತನ್ನ ಆಧಿಪತ್ಯವನ್ನು ಸ್ಥಾಪಿಸಿತು. ಈ ಕಂಪನಿಯ ಆಡಳಿತದಿಂದ ಭಾರತದ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಗಳಲ್ಲಿ ಮಹತ್ತರ ಬದಲಾವಣೆಗಳು ಉಂಟಾದವು. ಇದರಿಂದ ದೇಶದ ಆಂತರಿಕ ಶಕ್ತಿ, ಸಾಂಸ್ಕೃತಿಕ ಸಮೃದ್ಧತೆ ಮತ್ತು ಸ್ವಾಯತ್ತತೆಯನ್ನು ನಷ್ಟಮಾಡಿದರೂ, ನವೀಕರಣದ ಹಾದಿಯನ್ನು ಕ...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...