Breaking

Thursday, 20 January 2022

January 20: Birth Anniversary of Sawai Gandharva ಜನೆವರಿ 20: ಸವಾಯಿ ಗಂಧರ್ವ ಜನ್ಮದಿನಾಚರಣೆ

 ಜನೆವರಿ 20: ಸವಾಯಿ ಗಂಧರ್ವ ಜನ್ಮದಿನಾಚರಣೆ

January 20: Birth Anniversary of Sawai Gandharva  ಜನೆವರಿ 20: ಸವಾಯಿ ಗಂಧರ್ವ ಜನ್ಮದಿನಾಚರಣೆ

ಸವಾಯಿ ಗಂಧರ್ವ ಜನನ:

> ಸವಾಯಿ ಗಂಧರ್ವರವರು 19 ಜನವರಿ 1886ರಂದು ಧಾರವಾಡ ತಾಲೂಕಿನ ಕುಂದಗೋಳದಲ್ಲಿ ಜನಿಸಿದರು.

> ಹುಬ್ಬಳ್ಳಿಯಿಂದ ಸುಮಾರು 12 ಮೈಲಿ ದೂರದಲ್ಲಿರುವ ಕುಂದಗೋಳ 'ಜಮಖಂಡಿ ಸಂಸ್ಥಾನಕ್ಕೆ ಸೇರಿತ್ತು . ಅಧಿಕೃತ ಭಾಷೆ ಮರಾಠಿ, ಇಂತಹ ವಾತಾವರಣದಲ್ಲಿ ಹಿಂದೂಸ್ತಾನಿ ಸಂಗೀತದಲ್ಲಿ ಮನೆಮಾತಾಗಿದ್ದ ಸವಾಯಿ ಗಂಧರ್ವರ ಜನನವಾಯಿತು.

> ಅವರ ಬಾಲ್ಯದ ಹೆಸರು ರಾಮಚಂದ್ರ ಗಣೇಶ ಕುಂದಗೋಳಕರ್.

ಸವಾಯಿ ಗಂಧರ್ವ ರವರ ಪ್ರಸಿದ್ಧ

> ಧಾರವಾಡ ಜಿಲ್ಲೆಯ ಪುಟ್ಟ ತಾಲ್ಲೂಕಾದ ಕುಂದಗೋಳ ತನ್ನೊಡಲಿನ ಸಂಗೀತದಿಂದಾಗಿ ದೇಶ ವಿದೇಶಗಳಲ್ಲಿಯೂ ಇಂದು ಪರಿಚಿತವಾಗಿದೆ. ಅಲ್ಲಿ ಬಂದು ಹಾಡುವುದು ಸಂಗೀತಗಾರರಿಗೆ ಖುಷಿ, ಭಕ್ತಿ, ಅಭಿಮಾನದ ಸಂಗತಿ. ಅಲ್ಲಿಗೆ ಹೋಗುವುದೆಂದರೆ ಸಂಗೀತಪ್ರಿಯರಿಗೆ ತೀರ್ಥಯಾತ್ರೆಗೆ ಹೋದ ಹಾಗೆ. ಏಕೆಂದರೆ ಅದು ಹಿಂದೂಸ್ತಾನಿ ಸಂಗೀತ ಕ್ಷೇತ್ರದ 'ಗಂಧರ್ವ' ಸವಾಯಿ ಗಂಧರ್ವರು ಜನಿಸಿದ ಊರು, ಮೇರು ಕಲಾವಿದರೆನಿಸಿದ ಪಂಡಿತ್ ಭೀಮಸೇನ ಜೋಷಿ ಹಾಗೂ ವಿದುಷಿ ಗಂಗೂಬಾಯಿ ಹಾನಗಲ್ ಅವರಿಗೆ ಸಂಗೀತದ ತಾಲೀಮು ಕೊಟ್ಟ ಊರು. 

ಸಂಗೀತದಲ್ಲಿ ದೀಕ್ಷೆ

> ಶಿಕ್ಷಣವನ್ನು ನಿಲ್ಲಿಸಿದ ನಂತರ, ಪಂ. ಗಂಧರ್ವನ ತಂದೆ ಅವನನ್ನು ಕುಂದಗೋಳದಲ್ಲಿ ಕಂಡುಕೊಂಡ ಬಲವಂತರಾವ್ ಕೊಲಟ್ಕರ್‌ ಅವರ ಮಾರ್ಗದರ್ಶನದಲ್ಲಿ ಇರಿಸಿದರು. ಕೊಲ್ಲಟ್ಕರ್‌ ಅವರಿಂದ ಪಂ. ಗಂಧರ್ವ 75 ದ್ರುಪದ ರಚನೆಗಳು, 25 ತರಾನಾ ಸಂಯೋಜನೆಗಳು, ನೂರು ಇತರ ಸಂಯೋಜನೆಗಳನ್ನು ಕಲಿತರು ಮತ್ತು ಕೆಲವು ತಾಳಗಳನ್ನು ಕರಗತ ಮಾಡಿಕೊಂಡರು.


ಉಸ್ತಾದ್ ಅಬ್ದುಲ್ ಕರೀಂ ಖಾನ್


> ಹೈಸ್ಕೂಲ್‌ಗೆ ಪ್ರತಿದಿನ ಹುಬ್ಬಳ್ಳಿಗೆ ಪ್ರಯಾಣಿಸುವಾಗ, ಪಂಡಿತ ಸವಾಯಿಯವರು ಹುಬ್ಬಳ್ಳಿಯಲ್ಲಿ ಪ್ರತಿನಿತ್ಯ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಗಂಧರ್ವ ನಾಟಕಗಳನ್ನು ನೋಡುತ್ತಾ, ಸಂಗೀತ ಕೇಳುತ್ತಾ ಕಾಲ ಕಳೆಯುತ್ತಿದ್ದರು.

> ಕಿರಾಣಾ ಘರಾಣೆಯ ಗಾಯಕ ಅಬ್ದುಲ್ ಕರೀಂ ಖಾನರು 'ಭೈರವಿ ರಾಗ'ದಲ್ಲಿ ಹಾಡಿದ 'ಜಮುನಾಕೆ ತೀರ್'ಎಂಬ ಗೀತೆ ಅವರ ಹೃದಯದಲ್ಲಿ ಅಷ್ಟೊತ್ತಿತು. ಕಿರಾಣಾ ಘರಾಣೆಯ ಆದ್ಯ ಪ್ರವರ್ತಕರಾದ ಉಸ್ತಾದ ಅಬ್ದುಲ್ ಕರೀಮ್ ಖಾನ್ ಸಾಹೇಬರು ಕುಂದಗೋಳಕ್ಕೆ ತಮ್ಮ ಶಿಷ್ಯರಾದ ನಾನಾಸಾಹೇಬ ನಾಡಿಗೇರರಲ್ಲಿ ಆಗಾಗ್ಗೆ ಬರುತ್ತಿದ್ದರು. ಬಾಲಕ ಸವಾಯಿ ಗಂಧರ್ವರ ಸಂಗೀತಾಸಕ್ತಿಯನ್ನು ಕಂಡ ಖಾನ್ ಸಾಹೇಬರು ಅವನನ್ನು ತಮ್ಮ ಜೊತೆಯಲ್ಲಿ ಮಿರಜ್ಜೆಗೆ ಕರೆದುಕೊಂಡು ಹೋದರು.

> ಗುರುಗಳಿಗೆ ಶೃತಿ ತಂಬೂರಿ ಮೀಟುತ್ತಾ ಗಂಟೆಗಟ್ಟಲೆ ಸಂಗೀತವನ್ನು ಅವಲೋಕಿಸುವ ಅವಕಾಶವನ್ನು ರಾಮಭಾವು ಸದುಪಯೋಗಗೊಳಿಸಿಕೊಂಡರು. ನಿಧಾನವಾಗಿ ಸ್ವರಬೆರೆಸುವ ತಾಲೀಮು ಆರಂಭವಾಯಿತು. ಹೀಗೆ ಶ್ರದ್ಧಾನಿಷ್ಠೆಗಳಿಂದ ಗುರುಸಾನ್ನಿಧ್ಯದಲ್ಲಿ ಸಂಗೀತವನ್ನು ತಮ್ಮದಾಗಿಸಿಕೊಂಡರು.

> ಅಬ್ದುಲ್ ಕರೀಂ ಖಾನರಿಗೆ ತಮ್ಮ ಶಿಷ್ಯರು ಚೆನ್ನಾಗಿ ಕಲಿತು ಒಳ್ಳೆಯ ಹೆಸರು ಪಡೆಯಬೇಕು ಎಂಬ ಇಚ್ಛೆಯಲ್ಲಿ ತಮ್ಮ ಶಿಷ್ಯರಿಗೆ ಎಂಟು ವರ್ಷಗಳ ಕರಾರು ವಿಧಿಸುತ್ತಿದ್ದರು. ಸವಾಯಿ ಗಂಧರ್ವರು ತಮ್ಮ ಗುರುಗಳ ಬಳಿಯಲ್ಲಿ ತಮ್ಮ ಶಿಕ್ಷಣದ ಅವಧಿಯನ್ನು ಪೂರ್ಣಗೊಳಿಸಲಿಲ್ಲ. ಹೊಟ್ಟೆಪಾಡಿಗಾಗಿ ಮರಾಠಿ ನಾಟಕ ಕಂಪನಿಯೊಂದನ್ನು ಸೇರಿಕೊಂಡರು. ಆ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಸಂಗೀತ ಹಾಗೂ ನಾಟಕರಂಗದಲ್ಲಿ ಪ್ರಸಿದ್ಧರಾದ ಬಾಲಗಂಧರ್ವರಿಗಿಂತಲೂ ಸಂಗೀತ ಹಾಗೂ ಅಭಿನಯದಲ್ಲಿ ಇವರು ಹೆಚ್ಚು ಎನ್ನುವ ಅರ್ಥದಲ್ಲಿ ರಾಮಭಾವು ಕುಂದಗೋಳಕರ ಅವರನ್ನು ಸವಾಯಿ ಗಂಧರ್ವ ಎಂದು ಕರೆಯಲಾಯಿತು.

ಸವಾಯಿ ಗಂಧರ್ವ ರ ಶಿಷ್ಯರು


> 1916-41 ರ ವರೆಗಿನ 25 ವರ್ಷಗಳ ಕಾಲುಶತಮಾನದಲ್ಲಿ ಮಹತ್ವದ ಶಿಷ್ಯ ಪರಂಪರೆ ಸೃಷ್ಟಿಯಾಯಿತು. ಇವರಲ್ಲಿ ವಿ. ಎ. ಕಾಗಲ್ ಕರ್, ನೀಲ ಕಂಠ ಬುವಾ, ಗಡಗೋಳಿ ವೆಂಕಟರಾವ್, ರಾಮದುರ್ಗ ಕೃಷ್ಣಾ ಬಾಯಿ, ಗಂಗೂಬಾಯಿ ಹಾನಗಲ್, ಫಿರೋಜ್ ದಸ್ತಾರ್, ಭೀಮಸೇನ್ ಜೋಷಿ, ಬಸವರಾಜ ರಾಜಗುರು ಕನ್ನಡಿಗರು.


ಸಂಗೀತ ಪರಿವಾರ:


> 20ನೆಯ ಶತಮಾನದಲ್ಲಿ ಅವಿಭಜಿತ ಧಾರವಾಡ ಜಿಲ್ಲೆ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದ ರತ್ನಪ್ರಾಯ ಸಂಗೀತಗಾರರಿಗೆ ಜನ್ಮ ನೀಡಿದ ಜಿಲ್ಲೆಯಾಗಿದೆ. ಇವರಲ್ಲಿ ಕೆಲವರು ಸಂಗೀತಗಾರರಂತೂ ಅಖಿಲ ಭಾರತದಲ್ಲಿ ಸುಪ್ರಸಿದ್ಧರಾದವರು:

೧. ಸವಾಯಿ ಗಂಧರ್ವ -1886-1952 (ಧಾರವಾಡ ಜಿಲ್ಲೆಯ ಕುಂದಗೋಳದವರು)

9. ಮಲ್ಲಿಕಾರ್ಜುನ ಮನಸೂರ -1901- 1992 (ಧಾರವಾಡ ಜಿಲ್ಲೆಯ ಮನ್ಸೂರ್ನವರು)

೩.ಗಂಗೂಬಾಯಿ ಹಾನಗಲ್ - 1913-2009 (ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವರು)

೪. ಬಸವರಾಜ ರಾಜಗುರು -1917-1991 (ಧಾರವಾಡ ಜಿಲ್ಲೆಯ ಎಳಿವಾಳ ಗ್ರಾಮದವರು)

೫. ಭೀಮಸೇನ ಜೋಷಿ - 1922-2011 (ಗದಗ ಜಿಲ್ಲೆಯ ರೋಣದವರು)

೬. ಕುಮಾರ ಗಂಧರ್ವ -1924-1992 (ಬೆಳಗಾವಿ ಜಿಲ್ಲೆಯ ಸುಳೇಬಾವಿಯವರು)

ಸವಾಯಿ ಗಂಧರ್ವರಿಗೆ ಸಂದ ಗೌರವಗಳು


> ಸವಾಯಿ ಗಂಧರ್ವರಿಗೆ ಹೈದರಾಬಾದ್ ಕರ್ನಾಟಕ ಮಂಡಳಿಯ ಮಾನಪತ್ರ,

> ಧರಪುರದ ಮಹಾರಾಜರ ಚಿನ್ನದ ಪದಕ,

> 1938ರಲ್ಲಿ ಹುಬ್ಬಳ್ಳಿ ಮ್ಯೂಜಿಕ್ ಸರ್ಕಲ್ ವಾರ್ಷಿಕ ಉತ್ಸವದ ಅಧ್ಯಕ್ಷ ಪದವಿ,

> 1939ರಲ್ಲಿ ಕಲ್ಕತ್ತಾ ಬೆಂಗಾಲ್ ಮ್ಯೂಸಿಕ್ ಕಾನ್ಸರೆ ವಿಶೇಷವಾಗಿ ಗೌರವಿಸಿದ ಸುವರ್ಣ ಪದಕ ಮಂತಾದ ಅನೇಕ ಗೌರವಗಳು ಸಂದವು. ದೇಶದ ವಿವಿಧ ಆಕಾಶವಾಣಿಗಳಲ್ಲಿ ಅವರ ಸಂಗೀತ ಕಾರ್ಯಕ್ರಮಗಳು ಬಿತ್ತರಗೊಂಡವು.


ಸವಾಯಿ ಗಂಧರ್ವರ ನಿಧನ:


> ಸವಾಯಿ ಗಂಧರ್ವರು 1952 ರ ಸೆಪ್ಟೆಂಬರ್ 12 ರಂದು ಈ ಲೋಕವನ್ನಗಲಿದರು.

> ಕುಂದಗೋಳದಲ್ಲಿ ಪ್ರತಿವರ್ಷ ಭಾದ್ರಪದ ಕೃಷ್ಣಪಕ್ಷದ ನವಮಿಯಂದು ಸವಾಯಿ ಗಂಧರ್ವ ಪುಣ್ಯತಿಥಿ ಸಂಗೀತೋತ್ಸವ ನಡೆಯುತ್ತಾ ಬಂದಿದೆ.

ಸವಾಯಿ ಗಂಧರ್ವ ಉತ್ಸವ


> ಸವಾಯಿ ಗಂಧರ್ವರ ಸ್ಮರಣಾರ್ಥ ಅವರ ಶಿಷ್ಯ ಭೀಮಸೇನ್ ಜೋಶಿಯವರು ಪುಣೆಯಲ್ಲಿ ವಾರ್ಷಿಕ ಸವಾಯಿ ಗಂಧರ್ವ ಸಂಗೀತೋತ್ಸವವನ್ನು ಪ್ರಾರಂಭಿಸಿದರು.

> ಉತ್ಸವವು ಮೊದಲ ಎರಡು ದಶಕಗಳವರೆಗೆ ಸಾಧಾರಣ ಪ್ರಮಾಣದಲ್ಲಿ ನಡೆಯಿತು, ಆದರೆ ಇದು 1970 ಮತ್ತು 1980 ರ ದಶಕಗಳಲ್ಲಿ ಜನಪ್ರಿಯವಾಯಿತು.


No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Top-100 Question Answers General Knowledge Quiz in Kannada For All Competitive Exams-04

  Top-100 Question Answers General Knowledge Quiz in Kannada For All Competitive Exams-04 🌺 Top-100 Question Answers General Knowledge Quiz in Kannada For All Competitive Exams 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ  ಪ್ರಶ್ನೋತ್ತರಗಳ ಕ್ವಿಜ್   www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...