Breaking

Friday, 12 April 2024

ಮಕ್ಕಳ ಕಥೆ: ಪರರ ಸ್ವತ್ತು ಪಾಷಾಣಕ್ಕೆ ಸಮ

 ಮಕ್ಕಳ ಕಥೆ: ಪರರ ಸ್ವತ್ತು ಪಾಷಾಣಕ್ಕೆ ಸಮ

ಮಕ್ಕಳ ನೀತಿ‌ಕಥೆಗಳು, ಮಕ್ಕಳ‌ ಕಥೆಗಳು, ಮಕ್ಕಳ ನೀತಿಬೋಧಕ ಕಥೆಗಳು, Children Stories, Moral Stories


ಒಮ್ಮೆ ಚಂದ್ರಗುಪ್ತ ಮೌರ್ಯನು ತನ್ನ ಮೇಧಾವಿ ಮಂತ್ರಿ ಚಾಣಕ್ಯನೊಂದಿಗೆ ರಾಜ್ಯದಲ್ಲಿ ಸಂಚಾರ ಗೈಯುತ್ತಾನೆ. ಅದು ತುಂಬಾ ಮೈಕೊರೆವ ಚಳಿಗಾಲವಾದ್ದರಿಂದ, ಬಡ ಜನರ ಕಷ್ಟ ಸುಖ ಅರಿಯಲೆಂದು ಮಾರುವೇಶದಲ್ಲಿ ಇರುತ್ತಾರೆ. ಬಹುತೇಕರು ರಾತ್ರಿ ಸರಿಯಾಗಿ ಹೊದ್ದುಕೊಳ್ಳಲು ಇಲ್ಲದೆ, ಕೊರೆವ ಚಳಿಯಲ್ಲಿ ನಡುಗುತ್ತಿರುತ್ತಾರೆ. ಇದನ್ನು ಕಂಡ ರಾಜ ನೊಂದುಕೊಳ್ಳುತ್ತಾರೆ. 'ಇಂಥ ಚಳಿಯಲ್ಲಿ ಸರಿಯಾಗಿ ಹೊದ್ದುಕೊಳ್ಳಲು ಇರದೆ ಪರಿತಪಿಸುವ ಈ ಜನಕ್ಕೆ ಹೊದ್ದುಕೊಳ್ಳಲು ನಾಳೆ ಕಂಬಳಿ ವ್ಯವಸ್ಥೆ ಮಾಡಬೇಕು' ಎಂದು ರಾಜನು ಚಾಣಕ್ಯನಿಗೆ ಆಜ್ಞಾಪಿಸುತ್ತಾನೆ.


ಜನರಿಗೆ ಹಂಚಲೆಂದು ಆ ದಿನ ರಾತ್ರಿ ಕಂಬಳಿಗಳನ್ನು ಚಾಣಕ್ಯನ ನೂರಾರು ಮನೆಯಲ್ಲಿ ಸಂಗ್ರಹಿಸಿಡುತ್ತಾರೆ. ಇದನ್ನು ಹೇಗೋ ಅರಿತುಕೊಂಡ ಕಳ್ಳರು, ಕಂಬಳಿಗಳನ್ನು ದೋಚಲು ಚಾಣಕ್ಯನ ಮನೆಗೆ ಬರುತ್ತಾರೆ. ಅಲ್ಲಿ ಒಂದು ಚಾಪೆಯ ಮೇಲೆ ಚಾಣಕ್ಯನು ಹರುಕಲಾದ ಕಂಬಳಿ ಹೊದ್ದು ಕುಳಿತಿರುವುದನ್ನು ಕಂಡು ಗಾಬರಿಯಾದ ಕಳ್ಳರು ನಿಮ್ಮಲ್ಲಿ ಇಷ್ಟೊಂದು ಕಂಬಳಿ ಇದ್ದರೂ, ಹರುಕಲಾದ ಹಳೆ ಕಂಬಳಿ ಏಕೆ ಹೊದ್ದಿರುವಿರಿ?' ಎನ್ನುತ್ತಾರೆ. ಆಗ ಚಾಣಕ್ಯನು 'ಇಲ್ಲಿ ಸಂಗ್ರಹಿಸಿಟ್ಟ ಕಂಬಳಿಗಳು ಕಡುಬಡವರಿಗಾಗಿವೆ. ನನಗೆ ಹೊದ್ದುಕೊಳ್ಳಲು ಹರಕಲು ಕಂಬಳಿಯಾದರೂ ಇದೆ. ಅವರಿಗೆ ಇಂಥದ್ದೂ ಇಲ್ಲ. ಅಷ್ಟಕ್ಕೂ ಮಹಾರಾಜರು ನನ್ನನ್ನು ಪ್ರಾಮಾಣಿಕ ವ್ಯಕ್ತಿ ಎಂದು ಈ ಕಂಬಳಿಗಳನ್ನು ನನ್ನ ಮನೆಯಲ್ಲಿ ಇಟ್ಟಿದ್ದಾರೆ. ಇದರಲ್ಲಿ ಒಂದನ್ನು ತೆಗೆದುಕೊಂಡರೆ ನಾನು ರಾಜರಿಗೆ ಪ್ರಾಮಾಣಿಕನಾಗಿರಲು ಸಾಧ್ಯವೇ..?' ಎನ್ನುತ್ತಾನೆ.


ಈ ಮಾತು ಕೇಳುತ್ತಲೆ ಕಳ್ಳರು, ನಾಚಿಕೆಯಿಂದ‌ ತಲೆ ತಗ್ಗಿಸುತ್ತಾರೆ. ಪ್ರಾಮಾಣಿಕತೆ ಹಾಗೂ ನಂಬಿಗಸ್ಥರಾಗಲು ಮನಸ್ಸು ಮಾಡುತ್ತಾರೆ. ಇಲ್ಲಿಯವರೆಗೆ ನಾವು ಪರರಿಂದ ಕಳುವು ಮಾಡಿ ವೃದ್ಧಿಸಿಕೊಂಡ ಸಂಪತ್ತು ಪಾಪದ ಮೂಟೆ ಎಂದು ಅರ್ಥೈಸಿಕೊಳ್ಳುತ್ತಾರೆ. ಪ್ರಾಮಾಣಿಕತೆ ಎಂಬುದು ಗೌರವಯುತ ಜೀವನ ನಡೆಸಲು ಸಹಕಾರಿ ಎಂದರಿತರು, ತಾವು ಕಳ್ಳತನ ಮಾಡಲು ಬಂದುದಕ್ಕಾಗಿ ಚಾಣಕ್ಯರಲ್ಲಿ ಕ್ಷಮೆಯಾಚಿಸಿ ಹೊರ ನಡೆಯುತ್ತಾರೆ.


ಈ ಕಥೆಯ ನೀತಿ ಇಷ್ಟೇ, ಪರರ ವಸ್ತುಗಳು ಪಾಷಾಣಕ್ಕೆ ಸಮವೆಂದು ಪ್ರತಿಯೊಬ್ಬರೂ ತಿಳಿಯಬೇಕು. ಹಾಗೂ ಅನ್ಯರ ವಸ್ತುಗಳಿಗಾಗಿ ಆಸೆ ಪಡದೇ ನಮ್ಮಿಂದ ಸಾಧ್ಯವಾದಷ್ಟು ಪರರಿಗೆ ಉಪಕಾರವಾಗುವಂತಹ ಕೆಲಸಗಳನ್ನು ಮಾಡುತ್ತಾ ಸಾಗಬೇಕು. ನೀವೇನಂತೀರಿ??


ಕಥಾ ಕೃಪೆ: ಚಾಣಕ್ಯ ನೀತಿಸಾರ


No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...

08 ಜುಲೈ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು

          08 ಜುಲೈ  2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು 🌺 08 ಜುಲೈ 2022 ಪ್ರತಿದಿನದ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2022 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2022, Best Mock Test Series for Success in PSI PC 202,   September October 2022 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...